ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಾಗ ಶರತ್ ಅವರು ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ, ಕಾಂಗ್ರೆಸ್ ತೊರೆದು ಬಂದು ಸರ್ಕಾರ ರಚಿಸಲು ಕಾರಣರಾಗಿದ್ದ ಎಂ.ಟಿ.ಬಿ ನಾಗರಾಜು ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಈ ಕಾರಣಕ್ಕೆ ಪಕ್ಷದ ವಿರುದ್ಧ ತಿರುಗಿಬಿದ್ದ ಶರತ್, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಆರಿಸಿ ಬಂದಿದ್ದರು. ಶಾಸಕರಾದ ಬಳಿಕ ಅವರು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಆದರೆ, ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಕಡೆಗೆ ಶರತ್ ಒಲವು ತೋರಿಸುತ್ತಿದ್ದಾರೆ ಎನ್ನಲಾಗಿದೆ.