ಬೆಂಗಳೂರು: ‘ಸ್ವಾತಂತ್ರ್ಯಾನಂತರ ಕಾಂಗ್ರೆಸ್ ಪಕ್ಷ ದೇಶದ ಜನರ ಹಣ ಲೂಟಿ ಮಾಡಿದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಎನ್.ರವಿಕುಮಾರ್ ಟೀಕಿಸಿದರು.
ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಸುಳ್ಳು ಪ್ರಚಾರ ಮಾಡುತ್ತಿರುವುದು ಖಂಡನೀಯ ಎಂದು ಅವರುಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಆರ್ಸಿಇಪಿಗೆ ಪ್ರಧಾನಿ ಸಹಿ ಮಾಡಿದ್ದಾರೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಸುಳ್ಳು ಹೇಳಿದ್ದಾರೆ. ವಾಸ್ತವದಲ್ಲಿಪ್ರಧಾನಿಯವರು ಸಹಮತ ಸೂಚಿಸದೇ ಒಪ್ಪಂದದಿಂದ ಹೊರಗೆ ಬಂದಿರುವುದು ಇಡೀ ಜಗತ್ತಿಗೆ ತಿಳಿದಿರುವ ಸಂಗತಿ ಎಂದರು.