<p><strong>ಬೆಂಗಳೂರು:</strong> ರಾಜ್ಯದಲ್ಲಿ ಜನರು ಪ್ರವಾಹದಿಂದ ತತ್ತರಿಸಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್, ಜೆಡಿಎಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.</p>.<p>‘ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡಾ ಮಾಡಿಲ್ಲ’ ಎಂದುಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ.</p>.<p>‘ಅತೃಪ್ತ ಶಾಸಕರು ಮುಂಬೈಯಲ್ಲಿ ಉಳಿಯಲು ಪಂಚತಾರಾ ಹೋಟೆಲ್ ವ್ಯವಸ್ಥೆ ಮಾಡಿದವರು, ಬಡಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ’ ಎಂದು ಟೀಕಿಸಿದ್ದಾರೆ.</p>.<p><strong>₹5 ಸಾವಿರ ಕೋಟಿಗೆ ಆಗ್ರಹ:</strong>ವಾರದಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದರೂಕೇಂದ್ರ ತಂಡ ಭೇಟಿನೀಡಿಲ್ಲ. ರಾಜ್ಯದಲ್ಲಿ ಸಚಿವರು ಇಲ್ಲದೆ ಪರಿಸ್ಥಿತಿ ನಿಭಾಯಿಸುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಷ್ಟಕರವಾಗಿದೆ. ಪ್ರಧಾನಿ ಮಧ್ಯೆ ಪ್ರವೇಶಿಸಿ ಅಗತ್ಯ ನೆರವು ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.</p>.<p>ನೆರೆ ತೀವ್ರಸ್ವರೂಪ ಪಡೆದುಕೊಂಡಿದ್ದು, ‘ರಾಷ್ಟ್ರೀಯ ವಿಪ್ಪತ್ತು’ ಎಂದು ಘೋಷಿಸಿ, ತಕ್ಷಣ ₹5 ಸಾವಿರ ಕೋಟಿ ನೆರವು ಬಿಡುಗಡೆ ಮಾಡಬೇಕು. ದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗಿರುವುದರಿಂದ ತಕ್ಷಣವೇ ಕೇಂದ್ರ ಸರ್ಕಾರ ನೆರವಿಗೆ ನಿಲ್ಲಬೇಕು ಎಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಬಿ.ಎಸ್.ಯಡಿಯೂರಪ್ಪ ಅವರು ಈವರೆಗೂ ವಿರೋಧ ಪಕ್ಷದ ನಾಯಕರಾಗಿ ಸರಿಯಾಗಿ ಕೆಲಸ ಮಾಡಿಲ್ಲ. ಸರ್ಕಾರ ಬೀಳಿಸುವಲ್ಲಿ ನಿರತರಾಗಿದ್ದರು. ಈಗ ಮುಖ್ಯಮಂತ್ರಿಯಾದ ನಂತರವೂ ಕೆಲಸ ಮಾಡುತ್ತಿಲ್ಲ. ಸಚಿವ ಸಂಪುಟವೂ ಇಲ್ಲವಾಗಿದೆ. ಈಗ ಯಾವ ರೀತಿ ಸ್ಪಂದಿಸುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಾಗಿದೆ’ ಎಂದುಅವರು ಟೀಕಿಸಿದರು.</p>.<p><strong>ಕಾಂಗ್ರೆಸ್ ಶಾಸಕರ ವೇತನ</strong></p>.<p>ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕೆ ಕಾಂಗ್ರೆಸ್ ಸಂಸದರು, ಶಾಸಕರು ತಮ್ಮ ಒಂದು ತಿಂಗಳ ವೇತನ ನೀಡಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ಪ್ರಕಟಿಸಿದರು.</p>.<p>ಕಾಂಗ್ರೆಸ್ ಪಕ್ಷದ ವತಿಯಿಂದಲೂ ಹಣ ಸಂಗ್ರಹಿಸಿ ನೆರವು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಜನರು ಪ್ರವಾಹದಿಂದ ತತ್ತರಿಸಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್, ಜೆಡಿಎಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.</p>.<p>‘ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡಾ ಮಾಡಿಲ್ಲ’ ಎಂದುಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ.</p>.<p>‘ಅತೃಪ್ತ ಶಾಸಕರು ಮುಂಬೈಯಲ್ಲಿ ಉಳಿಯಲು ಪಂಚತಾರಾ ಹೋಟೆಲ್ ವ್ಯವಸ್ಥೆ ಮಾಡಿದವರು, ಬಡಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ’ ಎಂದು ಟೀಕಿಸಿದ್ದಾರೆ.</p>.<p><strong>₹5 ಸಾವಿರ ಕೋಟಿಗೆ ಆಗ್ರಹ:</strong>ವಾರದಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದರೂಕೇಂದ್ರ ತಂಡ ಭೇಟಿನೀಡಿಲ್ಲ. ರಾಜ್ಯದಲ್ಲಿ ಸಚಿವರು ಇಲ್ಲದೆ ಪರಿಸ್ಥಿತಿ ನಿಭಾಯಿಸುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಷ್ಟಕರವಾಗಿದೆ. ಪ್ರಧಾನಿ ಮಧ್ಯೆ ಪ್ರವೇಶಿಸಿ ಅಗತ್ಯ ನೆರವು ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.</p>.<p>ನೆರೆ ತೀವ್ರಸ್ವರೂಪ ಪಡೆದುಕೊಂಡಿದ್ದು, ‘ರಾಷ್ಟ್ರೀಯ ವಿಪ್ಪತ್ತು’ ಎಂದು ಘೋಷಿಸಿ, ತಕ್ಷಣ ₹5 ಸಾವಿರ ಕೋಟಿ ನೆರವು ಬಿಡುಗಡೆ ಮಾಡಬೇಕು. ದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗಿರುವುದರಿಂದ ತಕ್ಷಣವೇ ಕೇಂದ್ರ ಸರ್ಕಾರ ನೆರವಿಗೆ ನಿಲ್ಲಬೇಕು ಎಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<p>‘ಬಿ.ಎಸ್.ಯಡಿಯೂರಪ್ಪ ಅವರು ಈವರೆಗೂ ವಿರೋಧ ಪಕ್ಷದ ನಾಯಕರಾಗಿ ಸರಿಯಾಗಿ ಕೆಲಸ ಮಾಡಿಲ್ಲ. ಸರ್ಕಾರ ಬೀಳಿಸುವಲ್ಲಿ ನಿರತರಾಗಿದ್ದರು. ಈಗ ಮುಖ್ಯಮಂತ್ರಿಯಾದ ನಂತರವೂ ಕೆಲಸ ಮಾಡುತ್ತಿಲ್ಲ. ಸಚಿವ ಸಂಪುಟವೂ ಇಲ್ಲವಾಗಿದೆ. ಈಗ ಯಾವ ರೀತಿ ಸ್ಪಂದಿಸುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಾಗಿದೆ’ ಎಂದುಅವರು ಟೀಕಿಸಿದರು.</p>.<p><strong>ಕಾಂಗ್ರೆಸ್ ಶಾಸಕರ ವೇತನ</strong></p>.<p>ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕೆ ಕಾಂಗ್ರೆಸ್ ಸಂಸದರು, ಶಾಸಕರು ತಮ್ಮ ಒಂದು ತಿಂಗಳ ವೇತನ ನೀಡಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ಪ್ರಕಟಿಸಿದರು.</p>.<p>ಕಾಂಗ್ರೆಸ್ ಪಕ್ಷದ ವತಿಯಿಂದಲೂ ಹಣ ಸಂಗ್ರಹಿಸಿ ನೆರವು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>