ಬೆಂಗಳೂರು: ‘ನಾನು ಕಾಂಗ್ರೆಸ್ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲ, ಸಮಸ್ಯೆಗಳಿವೆ ಎಂದು ಹೇಳಿದ್ದೇನೆ. ಸಮಸ್ಯೆ ಬಗೆಹರಿಸುವ ಬಗ್ಗೆ ಸುರ್ಜೇವಾಲ ಮಾತನಾಡಿದ್ದಾರೆ. ಮುಂದೆ ವರಿಷ್ಠರನ್ನು ಕೂಡ ಭೇಟಿ ಮಾಡುತ್ತೇನೆ’ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದರು.
ಕಾಂಗ್ರೆಸ್ನಿಂದ ಇಬ್ರಾಹಿಂ ದೂರವಾಗುತ್ತಿದ್ದಾರೆಂಬ ಕಾರಣಕ್ಕೆ ಬೆನ್ಸನ್ ಟೌನ್ನಲ್ಲಿರುವ ಅವರ ನಿವಾಸಕ್ಕೆ ಗುರುವಾರ ಮಧ್ಯಾಹ್ನ ಭೇಟಿ ನೀಡಿ, ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಕೆಲಹೊತ್ತು ಚರ್ಚೆ ನಡೆಸಿದರು.