‘ನಿಜಲಿಂಗಪ್ಪ ಅವರ ಮನೆಯನ್ನು ಸಂರಕ್ಷಿಸಲು ಹಾಗೂ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ನಾಲ್ಕು ವರ್ಷಗಳಾದರೂ ಈ ಆದೇಶ ಕಾರ್ಯರೂಪಕ್ಕೆ ಬಂದಿಲ್ಲ. ಮನೆಯನ್ನು ಸರ್ಕಾರದ ವಶಕ್ಕೆ ಪಡೆಯುವುದಕ್ಕಾಗಿ ನಿಜಲಿಂಗಪ್ಪ ಅವರ ವಾರಸುದಾರರಾದ ಮೊಮ್ಮಗ ವಿನಯ್ ಮತ್ತು ಕಿರಣ್ ಶಂಕರ್ ಅವರನ್ನು ಚಿತ್ರದುರ್ಗದ ಹಿಂದಿನ ಜಿಲ್ಲಾಧಿಕಾರಿ ಅಮೆರಿಕದಿಂದ ಕರೆಸಿಕೊಂಡಿದ್ದರು. ಆದರೆ, ಕೊನೆ ಗಳಿಗೆಯಲ್ಲಿ ಆಸ್ತಿಯನ್ನು ಸರ್ಕಾರದ ಸ್ವಾಧೀನಕ್ಕೆ ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಪತ್ರದಲ್ಲಿ ದೂರಿದ್ದಾರೆ.