ಹೆಸರಘಟ್ಟ ಗ್ರಾಮದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಕೊರೊನಾ ಸರ್ವೆ ಕೆಲಸಕ್ಕೆ ಶಿಕ್ಷಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಆದರೆ, ಇವರ ಜೊತೆ ಬಿಜೆಪಿ ಕಾರ್ಯಕರ್ತರು ಹೋಗುತ್ತಿದ್ದಾರೆ. ಇವರನ್ನು ನೇಮಕ ಮಾಡಿದವರು ಯಾರು? ಯಲಹಂಕ ತಹಶೀಲ್ದಾರ್ ರಘುಮೂರ್ತಿ ಅವರು ರಾಜಕಾರಣಿಗಳ ಹಿಂದೆ ಓಡಾಡುವುದನ್ನು ಬಿಟ್ಟು ಕಚೇರಿಯಲ್ಲಿ ಕುಳಿತು ಜನತೆಯ ಕೆಲಸ ಮಾಡಲಿ’ ಎಂದು ಹೇಳಿದರು.