‘ಸಚಿವ ಆರ್. ಅಶೋಕ, ಪಾಲಿಕೆ ಆಯುಕ್ತರು, ಸೇರಿದಂತೆ ಹಲವರು ಗುಂಡಿ ಮುಚ್ಚಲು ಗಡುವು ಕೊಟ್ಟರೂ ಇದುವರೆಗೂ ಗುಂಡಿಗಳು ಮುಚ್ಚಿಲ್ಲ. ಬೆಂಗಳೂರಿನಲ್ಲಿ 7 ಸಚಿವರಿದ್ದಾರೆ. ಅವರ ಕೈಯಲ್ಲಿ ಈ ನಗರದ ನಿರ್ವಹಣೆ ಸಾಧ್ಯವಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳೇ ಬೆಂಗಳೂರು ಉಸ್ತುವಾರಿಯನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಈ ಜವಾಬ್ದಾರಿ ತಾವೇ ಇಟ್ಟುಕೊಂಡ ಮೇಲೆ ಅವರು ನಗರ ಸಂಚಾರ ಕೈಗೊಳ್ಳಬೇಕು. ಎಲ್ಲಿ ಏನೇನು ಸಮಸ್ಯೆ ಇದೆ ಎಂದು ಪರಿಶೀಲಿಸಬೇಕು’ ಎಂದು ಒತ್ತಾಯಿಸಿದರು.