ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಎಸ್. ನಿಜಲಿಂಗಪ್ಪ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿತ್ತು. ಅದರಲ್ಲಿ ದಂಡನಾ ಕ್ರಮಗಳನ್ನು ಮಾತ್ರ ನಮ್ಮ ಸರ್ಕಾರದ ಅವಧಿಯಲ್ಲಿ ಹೆಚ್ಚಿಸಲಾಗಿದೆ. ಈ ತಿದ್ದುಪಡಿಯ ಪರಿಣಾಮವಾಗಿ ರಾಜ್ಯದಲ್ಲಿ ಗೋವುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ' ಎಂದರು.