<p><strong>ಬೆಂಗಳೂರು</strong>: ‘ಕ್ಲಬ್ಗಳಲ್ಲಿನ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಸದನ ಸಮಿತಿ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು’ ಎಂದು ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಅವರು ಒತ್ತಾಯಿಸಿದ್ದಾರೆ.</p>.<p>ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಅವರು, ಸದನ ಸಮಿತಿ ವರದಿ ಅನುಷ್ಠಾನಗೊಳಿಸಲು ಕಾಯ್ದೆ ಜಾರಿಗೊಳಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.</p>.<p>14ನೇ ವಿಧಾನಸಭೆ ವೇಳೆ ರಚನೆಯಾಗಿದ್ದ ಸದನ ಸಮಿತಿಯು 180 ಪುಟಗಳ ಸಮಗ್ರ ವರದಿಯನ್ನು ಸಭಾಧ್ಯಕ್ಷರಿಗೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿನ ಕ್ಲಬ್ಗಳಲ್ಲಿ ನಡೆಯುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಬೈಲಾ ಉಲ್ಲಂಘನೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿರುವ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ವರದಿ ನೀಡಿ ಎಂಟು ವರ್ಷವಾದರೂ ಅದರ ಅನುಷ್ಠಾನವಾಗಿಲ್ಲ. ರಾಜ್ಯದ ಹಿತರಕ್ಷಣೆ ಮತ್ತು ಕ್ಲಬ್ಗಳು ಪಾರದರ್ಶಕವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ವರದಿಯನ್ನು ಜಾರಿಗೊಳಿಸಬೇಕು. ಇದರಿಂದ ಸರ್ಕಾರಕ್ಕೂ ಅಧಿಕ ಆದಾಯ ಬರಲಿದೆ ಎಂದು ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕ್ಲಬ್ಗಳಲ್ಲಿನ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಸದನ ಸಮಿತಿ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು’ ಎಂದು ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಅವರು ಒತ್ತಾಯಿಸಿದ್ದಾರೆ.</p>.<p>ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಅವರು, ಸದನ ಸಮಿತಿ ವರದಿ ಅನುಷ್ಠಾನಗೊಳಿಸಲು ಕಾಯ್ದೆ ಜಾರಿಗೊಳಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.</p>.<p>14ನೇ ವಿಧಾನಸಭೆ ವೇಳೆ ರಚನೆಯಾಗಿದ್ದ ಸದನ ಸಮಿತಿಯು 180 ಪುಟಗಳ ಸಮಗ್ರ ವರದಿಯನ್ನು ಸಭಾಧ್ಯಕ್ಷರಿಗೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿನ ಕ್ಲಬ್ಗಳಲ್ಲಿ ನಡೆಯುತ್ತಿರುವ ಕಾನೂನುಬಾಹಿರ ಚಟುವಟಿಕೆಗಳು, ಬೈಲಾ ಉಲ್ಲಂಘನೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿರುವ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ವರದಿ ನೀಡಿ ಎಂಟು ವರ್ಷವಾದರೂ ಅದರ ಅನುಷ್ಠಾನವಾಗಿಲ್ಲ. ರಾಜ್ಯದ ಹಿತರಕ್ಷಣೆ ಮತ್ತು ಕ್ಲಬ್ಗಳು ಪಾರದರ್ಶಕವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ವರದಿಯನ್ನು ಜಾರಿಗೊಳಿಸಬೇಕು. ಇದರಿಂದ ಸರ್ಕಾರಕ್ಕೂ ಅಧಿಕ ಆದಾಯ ಬರಲಿದೆ ಎಂದು ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>