ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ಮೆಜೆಸ್ಟಿಕ್ ತಲುಪಿದ್ದು, ಸುತ್ತಮುತ್ತಲಿನ ರಸ್ತೆಗಳಲ್ಲಿ ವಿಪರೀತ ದಟ್ಟಣೆ ಉಂಟಾಗಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಪಾದಯಾತ್ರೆ ಬಸವನಗುಡಿಯತ್ತ ಹೊರಟಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಮಲ್ಲೇಶ್ವರ, ರಾಜಾಜಿನಗರ, ಓಕಳಿಪುರ, ಗಾಂಧಿನಗರ, ಮಾಗಡಿ ರಸ್ತೆ, ಶೇಷಾದ್ರಿಪುರ ಹಾಗೂ ಸುತ್ತಮುತ್ತ ವಾಹನಗಳು ಸಾಲುಗಟ್ಟಿ ನಿಂತಿವೆ.
ಹಲವೆಡೆ ಮಾರ್ಗ ವಾಹನಗಳ ಬದಲಾವಣೆ ಮಾಡಿರುವ ಪೊಲೀಸರು, ರಸ್ತೆಗೆ ಅಡ್ಡವಾಗಿ ಬ್ಯಾರಿಕೇಡ್ ನಿಲ್ಲಿಸಿದ್ದಾರೆ. ಬ್ಯಾರಿಕೇಡ್ ಎದುರು ವಾಹನಗಳ ಸಾಲು ದೊಡ್ಡದಿದೆ.
ಪಾದಯಾತ್ರೆ ಮುಂದಕ್ಕೆ ಹೋದಂತೆ ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ದಟ್ಟಣೆಯಲ್ಲಿ ಬಿಎಂಟಿಸಿ ಬಸ್ಗಳು ಸಿಲುಕಿದ್ದು, ಪ್ರಯಾಣಿಕರು ಮಾರ್ಗಮಧ್ಯೆಯೇ ಇಳಿದು ನಡೆದುಕೊಂಡು ಹೊರಟಿದ್ದಾರೆ. ಪಾದಯಾತ್ರೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ ತಲುಪುವವರೆಗೂ ದಟ್ಟಣೆ ಇರಲಿದೆ.