‘ಕೆಲಸ ಕೊಡಿಸುವುದಾಗಿ ಹೇಳಿ ಅಮಾಯಕ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ರಮೇಶ ಜಾರಕಿಹೊಳಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತ ಸಿ.ಡಿ ಹಾಗೂ ವಿಡಿಯೊಗಳನ್ನು ರಾಜ್ಯದ ಜನತೆ ನೋಡಿದ್ದಾರೆ. ಇಷ್ಟಾದರೂ ರಮೇಶ ಜಾರಕಿಹೊಳಿ, ಅಧಿಕಾರ ಹಾಗೂ ಪ್ರಭಾವ ಬಳಸಿಕೊಂಡು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ರಾಜ್ಯ ಸರ್ಕಾರ ಹಾಗೂ ಎಸ್ಐಟಿ, ಆರೋಪಿ ಪರವೇ ಕೆಲಸ ಮಾಡುತ್ತಿದೆ’ ಎಂದೂ ಪ್ರತಿಭಟನಕಾರರು ದೂರಿದರು.