‘ಜನರು ವಿಶ್ವಾಸವಿಟ್ಟು ಆರಿಸಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಸೇಡಿನ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ನಾಯಕರು, ಅವರ ಕುಟುಂಬದವರು ಹಾಗೂ ಆಪ್ತರಿಗೆ ಕಿರುಕುಳ ನೀಡುತ್ತಿದೆ. ಬಿಜೆಪಿಯಲ್ಲೂ ಸಾಕಷ್ಟು ಮಂದಿ ಹಣವಂತರಿದ್ದಾರೆ. ಅವರಿಗೆ ಐ.ಟಿ ಅಧಿಕಾರಿಗಳು ಇದುವರೆಗೂ ಯಾವುದೇ ನೋಟಿಸ್ ನೀಡಿಲ್ಲ. ತನಿಖೆಗೂ ಒಳಪಡಿಸಿಲ್ಲ’ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.