ಅಲ್ಲಿಂದ ಬೈಕ್ ರ್ಯಾಲಿ ಮೂಲಕ ಕಾರ್ಯಕರ್ತರು, ಮಲ್ಲೇಶ್ವರದ ಬಿಜೆಪಿ ಕಚೇರಿಯತ್ತ ಹೊರಟರು. ಅವರೆಲ್ಲರನ್ನೂ ಶೇಷಾದ್ರಿಪುರದ ನಟರಾಜ್ ಚಿತ್ರಮಂದಿರ ಬಳಿಯೇ ತಡೆದಿದ್ದ ಪೊಲೀಸರು, ವಾಪಸ್ ಹೋಗುವಂತೆ ಮನವಿ ಮಾಡಿದರು. ಪೊಲೀಸರ ಜೊತೆಗೇ ವಾಗ್ವಾದ ನಡೆಸಿದ ಕಾರ್ಯಕರ್ತರು, ಬ್ಯಾರಿಕೇಡ್ ಏರಿ ಮುಂದೆ ಹೋಗಲು ಪ್ರಯತ್ನಿಸಿದರು.