ಇದೇ 8ರಂದು ನಗರದ ಮೂರು ಕ್ಷೇತ್ರಗಳಲ್ಲಿ ಯಾವುದಾದರೊಂದು ಕ್ಷೇತ್ರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ರಾಜ್ಯಮಟ್ಟದ ಬಹುತೇಕ ನಾಯಕರು ಭಾಗವಹಿಸಲಿದ್ದಾರೆ. ನಂತರ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ ಮುಂದುವರಿಯಲಿದ್ದು, ಇದರಲ್ಲಿ ಪ್ರಮುಖರು ಕಡ್ಡಾಯವಾಗಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಮಟ್ಟದ ನಾಯಕರು ಹೋರಾಟದ ತೀವ್ರತೆ ಹೆಚ್ಚಿಸಲಿದ್ದಾರೆಎಂದು ಪಕ್ಷದ ಮೂಲಗಳು ತಿಳಿಸಿವೆ.