‘ಸರ್ಕಾರಗಳ ವೈಫಲ್ಯವನ್ನು ಎತ್ತಿ ತೋರಿಸಿದ ನ್ಯಾಯಮೂರ್ತಿಗಳನ್ನೇ, ‘ಅವರೇನು ಸರ್ವಜ್ಞರಾ’ ಎಂದು ಸಿ.ಟಿ. ರವಿ ಪ್ರಶ್ನಿಸಿದ್ದಾರೆ. ‘ಆಮ್ಲಜನಕ ದೊರಕದಿದ್ದರೆ ನೇಣು ಹಾಕಿಕೊಳ್ಳಬೇಕಾ ನಾನು’ ಎಂದು ಡಿ.ವಿ. ಸದಾನಂದ ಗೌಡ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇವರಿಬ್ಬರ ಹೇಳಿಕೆಗಳು ನ್ಯಾಯಾಂಗ ನಿಂದನೆಯಾಗುತ್ತವೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದೂ ಒತ್ತಾಯಿಸಿದರು