<p><strong>ಬೆಂಗಳೂರು: </strong>ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಜನರ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.</p>.<p>ಶ್ರೀರಾಮಮಂದಿನ ಆಟದ ಮೈದಾನದಿಂದ ರಾಜಾಜಿನಗರದ ಆರ್.ಟಿ.ಒ.ಸಂಕೀರ್ಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾಮಲಿಂಗಾರೆಡ್ಡಿ,‘ಕೇಂದ್ರ ಸರ್ಕಾರ ದಿನೇ ದಿನೇ ದರ ಏರಿಸುವ ಮೂಲಕ ಬಡವರು ಹಾಗೂ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ’ ಎಂದು ದೂರಿದರು.</p>.<p>ಮಾಜಿ ಮೇಯರ್ ಜಿ.ಪದ್ಮಾವತಿ, ‘ಈಗ ತೈಲದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದರಿಂದ ಹಲವಾರು ಸಮಸ್ಯೆಗಳು ಉದ್ಭವಿಸಲಿವೆ. ಕೊರೊನಾ ಹೊಡೆತದಿಂದ ಅನೇಕರು ಉದ್ಯೋಗ ಕಳೆದುಕೊಂಡು ದಿಕ್ಕು ತೋಚದೆ ಕೂತಿದ್ದಾರೆ. ದರ ಏರಿಕೆಯು ಜನರನ್ನು ಮಾನಸಿಕ ಒತ್ತಡಕ್ಕೆ ತಳ್ಳಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಜನರ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.</p>.<p>ಶ್ರೀರಾಮಮಂದಿನ ಆಟದ ಮೈದಾನದಿಂದ ರಾಜಾಜಿನಗರದ ಆರ್.ಟಿ.ಒ.ಸಂಕೀರ್ಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>ಪ್ರತಿಭಟನೆಯಲ್ಲಿಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾಮಲಿಂಗಾರೆಡ್ಡಿ,‘ಕೇಂದ್ರ ಸರ್ಕಾರ ದಿನೇ ದಿನೇ ದರ ಏರಿಸುವ ಮೂಲಕ ಬಡವರು ಹಾಗೂ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ’ ಎಂದು ದೂರಿದರು.</p>.<p>ಮಾಜಿ ಮೇಯರ್ ಜಿ.ಪದ್ಮಾವತಿ, ‘ಈಗ ತೈಲದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದರಿಂದ ಹಲವಾರು ಸಮಸ್ಯೆಗಳು ಉದ್ಭವಿಸಲಿವೆ. ಕೊರೊನಾ ಹೊಡೆತದಿಂದ ಅನೇಕರು ಉದ್ಯೋಗ ಕಳೆದುಕೊಂಡು ದಿಕ್ಕು ತೋಚದೆ ಕೂತಿದ್ದಾರೆ. ದರ ಏರಿಕೆಯು ಜನರನ್ನು ಮಾನಸಿಕ ಒತ್ತಡಕ್ಕೆ ತಳ್ಳಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>