ವಿಡಿಯೊ ತುಣುಕಿನ ಮೂಲಕ ಟ್ವೀಟ್ ಮಾಡಿರುವ ಅವರು, ‘ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಕೃಷಿ ಮಸೂದೆಗಳಿಂದಾಗಿ ರೈತರು, ಕಾರ್ಮಿಕರು ಸಂಕಷ್ಟದಲ್ಲಿದ್ದು, ಕಾಂಗ್ರೆಸ್ ಅವರೆಲ್ಲರ ಧ್ವನಿಯಾಗಿ ನಿಂತಿದೆ. ಅದರ ಭಾಗವಾಗಿ, ಸಹಿ ಅಭಿಯಾನ ನಡೆಸಿ, ರಾಷ್ಟ್ರಪತಿಗೆ ಮನವಿ ಸಲ್ಲಿಸಲು ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಸಂಕಲ್ಪ ಮಾಡಿದ್ದಾರೆ’ ಎಂದಿದ್ದಾರೆ.