ಜಾಥಾ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಇಂಧನ ಸೇರಿದಂತೆ ಅಗತ್ಯ ವಸ್ತುಗಳು, ಮನೆ ನಿರ್ಮಾಣ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ನಾವು ಎಷ್ಟೇ ಹೇಳಿದರೂ ಎಮ್ಮೆ ಚರ್ಮದ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಸರ್ಕಾರಕ್ಕೆ ಕಣ್ಣು, ಕಿವಿ, ಬಾಯಿ ಯಾವುದೂ ಇಲ್ಲ. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಜನಸಾಮಾನ್ಯರಿಗೆ ಬಡವರ್ಗದವರಿಗೆ ತಲುಪುತ್ತಿಲ್ಲ. ಜನರ ರಕ್ತವನ್ನು ಸರ್ಕಾರ ಹೀರುತ್ತಿದೆ. ಜನರ ಧ್ವನಿಯಾಗಿ ನಾವು ಈ ಪ್ರತಿಭಟನೆ ಮಾಡುತ್ತಿದ್ದೇವೆ. ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಹೋರಾಟ ಹಮ್ಮಿಕೊಳ್ಳುತ್ತೇವೆ’ ಎಂದರು.