ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿಂದ 21ರಂದು ಪಾದಯಾತ್ರೆ

Last Updated 18 ಅಕ್ಟೋಬರ್ 2019, 19:40 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್‌ನ 101 ಟಿಕೆಟ್‌ ಆಕಾಂಕ್ಷಿಗಳುಇದೇ 21ರಂದು ಬೆಳಿಗ್ಗೆ 10 ಗಂಟೆಗೆ
ಕೆ.ಆರ್‌.ಪುರದ ಸಂತೆ ಮೈದಾನ ದಿಂದ ಕೆಪಿಸಿಸಿ ಕಚೇರಿವರೆಗೆ ಪಾದಯಾತ್ರೆ ಹೊರಟು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಅವರಿಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದು ಅಖಿಲ ಕರ್ನಾಟಕ ರೈತರ ಮತ್ತು ವ್ಯಾಪಾರಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಲೆ ಶ್ರೀನಿವಾಸ್‌ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಉಪಚುನಾವಣೆ ಹೆಸರಿನಲ್ಲಿ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ನಾಯಕರಿಗೆ ಟಿಕೆಟ್‌ ನೀಡುವ ಬದಲು ಜನರ ಸಮಸ್ಯೆಗಳನ್ನು ಅರಿತ ನಮ್ಮಂಥ ಜನಸಾಮಾನ್ಯರಿಗೆ ಟಿಕೆಟ್ ನೀಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT