ಬೆಂಗಳೂರು: ‘ಕಾಂಗ್ರೆಸ್ನ 101 ಟಿಕೆಟ್ ಆಕಾಂಕ್ಷಿಗಳುಇದೇ 21ರಂದು ಬೆಳಿಗ್ಗೆ 10 ಗಂಟೆಗೆ
ಕೆ.ಆರ್.ಪುರದ ಸಂತೆ ಮೈದಾನ ದಿಂದ ಕೆಪಿಸಿಸಿ ಕಚೇರಿವರೆಗೆ ಪಾದಯಾತ್ರೆ ಹೊರಟು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದು ಅಖಿಲ ಕರ್ನಾಟಕ ರೈತರ ಮತ್ತು ವ್ಯಾಪಾರಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಲೆ ಶ್ರೀನಿವಾಸ್ ತಿಳಿಸಿದರು.