ದೇವರಬಿಸನಹಳ್ಳಿಯ ಕರಿಯಮ್ಮನ ಅಗ್ರಹಾರದ ಮಂತ್ರಿ ಇಸ್ಪನ್ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಹೊಂದಿಕೊಂಡಿ
ರುವ ಖಾಲಿ ಜಾಗದಲ್ಲಿ 300ಕ್ಕೂ ಹೆಚ್ಚು ಜೋಪಡಿಗಳು ಇದ್ದವು. ಏಕಾಏಕಿ 80ಕ್ಕೂ ಹೆಚ್ಚು ಜೋಪಡಿಗಳನ್ನು ಕೆಡವಲಾಗಿದ್ದು, ಅಲ್ಲಿ ವಾಸವಿದ್ದ ಉತ್ತರ ಕರ್ನಾಟಕ ಹಾಗೂ ಉತ್ತರ ಭಾರತದ ನೂರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬಿದ್ದಿವೆ.