ಬೆಂಗಳೂರು: ‘ಉಚಿತ ವಸತಿ, ನಿವೇಶನ, ಅನ್ನಭಾಗ್ಯ, ಕ್ಷೀರಭಾಗ್ಯದಂತಹ ಹಲವಾರು ಯೋಜನೆಗಳನ್ನು ಆರಂಭಿಸಿದ ಕಾಂಗ್ರೆಸ್ ಪಕ್ಷ ಸದಾ ಬಡವರ, ರೈತರ, ಕಾರ್ಮಿಕರ ಪರವಾಗಿ ದುಡಿಯುತ್ತಿರುವ ಪಕ್ಷ. ಮುಂದೆಯೂ ಕ್ಷೇತ್ರದ ಅಭಿವೃದ್ಧಿಗಾಗಿ ನಿಮ್ಮ ಮಗಳಿಗೆ ಮತ ನೀಡಿ ಬೆಂಬಲಿಸಿ’ ಎಂದು ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ಮನವಿ ಮಾಡಿದರು.