ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಕೇರಳದ ಕಚೇರಿ ಮೇಲೆ ದಾಳಿ ನಡೆಸಿದ್ದ ಪ್ರಕರಣದಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸ್ವಾದದ (ಸಿಪಿಐ–ಎಂ) ವಿದ್ಯಾರ್ಥಿ ಸಂಘಟನೆ ಎಸ್ಎಫ್ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎಸ್ಎಫ್ಐ ಕೃತ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾದ ಕಾಂಗ್ರೆಸ್ನ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು, ‘ಸಿಪಿಐ–ಎಂ’ ಕಚೇರಿ ಎಂಬುದಾಗಿ ಭಾವಿಸಿ ‘ಸಿಪಿಐ’ ಕಚೇರಿಗೆ ನುಗ್ಗಿ ಗಲಾಟೆ ಮಾಡಿರುವುದಾಗಿ ಗೊತ್ತಾಗಿದೆ. ಆದರೆ, ಘಟನೆ ಬಗ್ಗೆ ಯಾವುದೇ ದೂರು
ದಾಖಲಾಗಿಲ್ಲ.