ಯಲಹಂಕ: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರ ಖಂಡಿಸಿ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಯಲಹಂಕ ಮತ್ತು ಬ್ಯಾಟರಾಯನಪುರ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ವೃತ್ತಗಳಲ್ಲಿ ಪ್ರತಿಭಟನೆ ನಡೆಸಿದರು.
ಯಲಹಂಕದ ಕೋಗಿಲು ವೃತ್ತ, ಸಂತೆ ವೃತ್ತ ಮತ್ತು ಎನ್ಇಎಸ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಆರ್. ಶ್ರೀಧರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪಾಲಿಕೆ ಮಾಜಿ ಸದಸ್ಯರಾದ ವೈ.ಎನ್.ಅಶ್ವಥ್, ಪದ್ಮಾವತಿ ಅಮರನಾಥ್, ಮುಖಂಡ ಗೋಪಿ ಪಾಲ್ಗೊಂಡಿದ್ದರು.
ಬ್ಯಾಟರಾಯನಪುರ ಕ್ಷೇತ್ರದ ಹೆಬ್ಬಾಳ ಫ್ಲೈ ಓವರ್ ಸಮೀಪದ ಎಸ್ಟೀಂ ಮಾಲ್ ಬಳಿ ಶಾಸಕ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬ್ಯಾಟರಾಯನಪುರದ ಬಿಬಿಎಂಪಿ ಕಛೇರಿ, ಸಾದಹಳ್ಳಿ ಗೇಟ್, ಕೊಡಿಗೇಹಳ್ಳಿ, ತಿಂಡ್ಲು, ಬಾಗಲೂರು ಮುಖ್ಯರಸ್ತೆ, ಹೆಗಡೆನಗರ, ನಾಗವಾರ ಹಾಗೂ ವಿದ್ಯಾರಣ್ಯಪುರದ ನಂಜಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ಎನ್.ಕೆ.ಮಹೇಶ್ ಕುಮಾರ್ ಉಪಸ್ಥಿತರಿದ್ದರು.