ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ 2 ಸಾವಿರಕ್ಕೂ ಹೆಚ್ಚು ನೌಕರರು ಭಿತ್ತಿಪತ್ರ ಪ್ರದರ್ಶನ ಮಾಡಿ, ಹಕ್ಕೊತ್ತಾಯ ಮಾಡಿದರು. ಭಿತ್ತಿಪತ್ರ ಪ್ರದರ್ಶನಕ್ಕೆ ಸಾಹಿತಿ ಶಾಂತಕುಮಾರಿ ಚಾಲನೆ ನೀಡಿದರು.