ಬೆಂಗಳೂರು: ಕೋವಿಡ್ ಸೋಂಕಿತ ಕಾರ್ಮಿಕರಿಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿವೇತನ ಸಹಿತ ರಜೆ ಸೌಲಭ್ಯ ದೊರಕಿಸಲು ಅಗತ್ಯ ನಿರ್ದೇಶನ ನೀಡಬೇಕೆಂಬ ಮನವಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಆಲ್ ಇಂಡಿಯಾ ಟ್ರೇಡ್ ಕಾಂಗ್ರೆಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ನೋಟಿಸ್ ನೀಡಲು ಆದೇಶಿಸಿತು.
‘ಇಎಸ್ಐ ಯೋಜನೆಯಡಿ ನೋಂದಣಿಯಾಗದ ಕಾರ್ಮಿಕರಿಗೆ ವೇತನ ಸಹಿತ ರಜೆ ಸೌಲಭ್ಯವಿಲ್ಲ. ಈ ಸಂಬಂಧ ಮಾರ್ಗದರ್ಶಿ ಸೂತ್ರಗಳು(ಎಸ್ಒಪಿ) ಇಲ್ಲದಿರುವ ಕಾರಣ ಕಾರ್ಮಿಕರು ತೊಂದರಿಗೆ ಸಿಲುಕಿದ್ದಾರೆ’ ಎಂದು ಅರ್ಜಿದಾರರು ವಿವರಿಸಿದ್ದಾರೆ.