ಬೆಂಗಳೂರು: ಸಿನಿಮಾ ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು ರೂಪಿಸಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ನಟ ದರ್ಶನ್ ಅಭಿನಯದ ‘ರಾಬರ್ಟ್’ ಸೇರಿ ಹಲವು ಸಿನಿಮಾ ನಿರ್ಮಿಸಿರುವ ಉಮಾಪತಿ ಅವರ ಕೊಲೆಗೆ ಸಂಚು ನಡೆದಿತ್ತು. ಈ ಬಗ್ಗೆ 2020ರಲ್ಲಿ ಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು’ ಎಂದು ಸಿಸಿಬಿ ಮೂಲಗಳು ಹೇಳಿವೆ.
‘ಪ್ರಕರಣ ಸಂಬಂಧ ಹಲವ ರನ್ನು ಈಗಾಗಲೇ ಬಂಧಿಸಲಾಗಿದೆ. ಆರೋಪಿಗಳಾದ ದರ್ಶನ್ ಹಾಗೂ ಸಂಜು ಎಂಬುವರು ತಲೆಮರೆಸಿಕೊಂಡಿದ್ದರು. ಅವರಿಬ್ಬರನ್ನು ಸುಂಕದಕಟ್ಟೆ ಬಳಿ ಇತ್ತೀಚೆಗೆ ಬಂಧಿಸಲಾಗಿದೆ‘ ಎಂದೂ ತಿಳಿಸಿವೆ.