<p><strong>ಬೆಂಗಳೂರು: </strong>ವೈಟ್ಫೀಲ್ಡ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಕಾನ್ಸ್ಟೆಬಲ್ ಕಿರಣ್ಕುಮಾರ್ ಗುರ್ಜಾರ್ (30) ಎಂಬುವರಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.</p>.<p>ಘಟನೆ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಕಿರಣ್ಕುಮಾರ್ ಜೂನ್ 2ರಂದು ರಾತ್ರಿ ಗಸ್ತು ಕರ್ತವ್ಯದಲ್ಲಿದ್ದರು. ತಡರಾತ್ರಿ ನಿಲ್ದಾಣದ ಟಿಕೆಟ್ ಕೌಂಟರ್ ಎದುರು ಮೂವರು ಯುವಕರು, ಇಬ್ಬರು ಯುವತಿಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು. ಸ್ಥಳಕ್ಕೆ ಹೋಗಿದ್ದ ಕಿರಣ್ಕುಮಾರ್, ಬುದ್ಧಿವಾದ ಹೇಳಿ ಯುವತಿಯರನ್ನು ಸ್ಥಳದಿಂದ ಕಳುಹಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆದರೆ, ಸ್ಥಳದಿಂದ ಹೋಗದ ಯುವಕರು ಜಗಳ ತೆಗೆದಿದ್ದರು. ಒಬ್ಬಾತ ಚಾಕುವಿನಿಂದ ಕಿರಣ್ಕುಮಾರ್ ಅವರ ಕೈಗೆ ಇರಿದಿದ್ದ. ನಿಲ್ದಾಣದಲ್ಲಿದ್ದ ಸಿಬ್ಬಂದಿಯನ್ನು ರಕ್ಷಣೆಗಾಗಿ ಕೂಗಾಡುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಓಡಿಹೋಗಿದ್ದಾರೆ. ಗಾಯಗೊಂಡ ಕಾನ್ಸ್ಟೆಬಲ್ ಚಿಕಿತ್ಸೆ ಪಡೆದಿದ್ದಾರೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೈಟ್ಫೀಲ್ಡ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಕಾನ್ಸ್ಟೆಬಲ್ ಕಿರಣ್ಕುಮಾರ್ ಗುರ್ಜಾರ್ (30) ಎಂಬುವರಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.</p>.<p>ಘಟನೆ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಕಿರಣ್ಕುಮಾರ್ ಜೂನ್ 2ರಂದು ರಾತ್ರಿ ಗಸ್ತು ಕರ್ತವ್ಯದಲ್ಲಿದ್ದರು. ತಡರಾತ್ರಿ ನಿಲ್ದಾಣದ ಟಿಕೆಟ್ ಕೌಂಟರ್ ಎದುರು ಮೂವರು ಯುವಕರು, ಇಬ್ಬರು ಯುವತಿಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು. ಸ್ಥಳಕ್ಕೆ ಹೋಗಿದ್ದ ಕಿರಣ್ಕುಮಾರ್, ಬುದ್ಧಿವಾದ ಹೇಳಿ ಯುವತಿಯರನ್ನು ಸ್ಥಳದಿಂದ ಕಳುಹಿಸಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆದರೆ, ಸ್ಥಳದಿಂದ ಹೋಗದ ಯುವಕರು ಜಗಳ ತೆಗೆದಿದ್ದರು. ಒಬ್ಬಾತ ಚಾಕುವಿನಿಂದ ಕಿರಣ್ಕುಮಾರ್ ಅವರ ಕೈಗೆ ಇರಿದಿದ್ದ. ನಿಲ್ದಾಣದಲ್ಲಿದ್ದ ಸಿಬ್ಬಂದಿಯನ್ನು ರಕ್ಷಣೆಗಾಗಿ ಕೂಗಾಡುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಓಡಿಹೋಗಿದ್ದಾರೆ. ಗಾಯಗೊಂಡ ಕಾನ್ಸ್ಟೆಬಲ್ ಚಿಕಿತ್ಸೆ ಪಡೆದಿದ್ದಾರೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>