<p><strong>ಬೆಂಗಳೂರು:</strong> ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋಗುತ್ತಿದ್ದ ಸರಗಳ್ಳನನ್ನು ಪೊಲೀಸ್ ಕಾನ್ಸ್ಟೆಬಲ್ ಸುಮಾರು ಒಂದೂವರೆ ಕಿ.ಮೀ. ಬೆನ್ನಟ್ಟಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಶಾಮಣ್ಣ ಗಾರ್ಡನ್ ನಿವಾಸಿ ಸೈಯದ್ ಜಾಫರ್ (20) ಬಂಧಿತ ಆರೋಪಿ. ಮದ್ಯ ಕುಡಿಯುವ ಚಟ ಹೊಂದಿರುವ ಈತ, ಯೂಟ್ಯೂಬ್ನಲ್ಲಿ ಕಳ್ಳತನದ ವಿಡಿಯೊ ನೋಡಿ ಕೃತ್ಯವೆಸಗಿದ್ದ ಎಂದು ಪೊಲೀಸರು ತಿಳಿಸಿದರು.</p>.<p>ಫೆಬ್ರುವರಿ 5ರ ಸಂಜೆ 7.20ರ ಸುಮಾರಿನಲ್ಲಿ ದಾಕ್ಷಾಯಿಣಿ ಎಂಬುವವರು ಕೆಲಸ ಮುಗಿಸಿಕೊಂಡು ವಿಜಯನಗರದ ಹಂಪಿನಗರ 8ನೇ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ವೇಳೆ ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿ, 40 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ.</p>.<p>ತಕ್ಷಣ ಮಹಿಳೆ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಅದೇ ಸಮಯಕ್ಕೆ ಮನೆಯಿಂದ ವಿಜಯನಗರ ಪೊಲೀಸ್ ಠಾಣೆಗೆ ಹೋಗುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್ ಹಣಮಂತ ಪುಟಾಣಿ, ಇದನ್ನು ಗಮನಿಸಿ ಆರೋಪಿಯನ್ನು ಬೆನ್ನಟ್ಟಿ, ಹಿಡಿದು ₹6 ಲಕ್ಷ ಮೌಲ್ಯದ ಸರವನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಸಾರ್ವಜನಿಕರ ಸಹಾಯದೊಂದಿಗೆ ಆರೋಪಿಯನ್ನು ಠಾಣೆಗೆ ಒಪ್ಪಿಸಿದ್ದಾರೆ.</p>.<p>ಹಣಮಂತ ಪುಟಾಣಿ ಅವರ ಕಾರ್ಯಕ್ಷಮತೆಯನ್ನು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಶ್ಲಾಘಿಸಿ, ಪ್ರಶಂಸನಾ ಪತ್ರ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋಗುತ್ತಿದ್ದ ಸರಗಳ್ಳನನ್ನು ಪೊಲೀಸ್ ಕಾನ್ಸ್ಟೆಬಲ್ ಸುಮಾರು ಒಂದೂವರೆ ಕಿ.ಮೀ. ಬೆನ್ನಟ್ಟಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಶಾಮಣ್ಣ ಗಾರ್ಡನ್ ನಿವಾಸಿ ಸೈಯದ್ ಜಾಫರ್ (20) ಬಂಧಿತ ಆರೋಪಿ. ಮದ್ಯ ಕುಡಿಯುವ ಚಟ ಹೊಂದಿರುವ ಈತ, ಯೂಟ್ಯೂಬ್ನಲ್ಲಿ ಕಳ್ಳತನದ ವಿಡಿಯೊ ನೋಡಿ ಕೃತ್ಯವೆಸಗಿದ್ದ ಎಂದು ಪೊಲೀಸರು ತಿಳಿಸಿದರು.</p>.<p>ಫೆಬ್ರುವರಿ 5ರ ಸಂಜೆ 7.20ರ ಸುಮಾರಿನಲ್ಲಿ ದಾಕ್ಷಾಯಿಣಿ ಎಂಬುವವರು ಕೆಲಸ ಮುಗಿಸಿಕೊಂಡು ವಿಜಯನಗರದ ಹಂಪಿನಗರ 8ನೇ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ವೇಳೆ ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿ, 40 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ.</p>.<p>ತಕ್ಷಣ ಮಹಿಳೆ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ಅದೇ ಸಮಯಕ್ಕೆ ಮನೆಯಿಂದ ವಿಜಯನಗರ ಪೊಲೀಸ್ ಠಾಣೆಗೆ ಹೋಗುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್ ಹಣಮಂತ ಪುಟಾಣಿ, ಇದನ್ನು ಗಮನಿಸಿ ಆರೋಪಿಯನ್ನು ಬೆನ್ನಟ್ಟಿ, ಹಿಡಿದು ₹6 ಲಕ್ಷ ಮೌಲ್ಯದ ಸರವನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಸಾರ್ವಜನಿಕರ ಸಹಾಯದೊಂದಿಗೆ ಆರೋಪಿಯನ್ನು ಠಾಣೆಗೆ ಒಪ್ಪಿಸಿದ್ದಾರೆ.</p>.<p>ಹಣಮಂತ ಪುಟಾಣಿ ಅವರ ಕಾರ್ಯಕ್ಷಮತೆಯನ್ನು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಶ್ಲಾಘಿಸಿ, ಪ್ರಶಂಸನಾ ಪತ್ರ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>