<p><strong>ಬೆಂಗಳೂರು:</strong> ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ ₹ 7.11 ಕೋಟಿ ದರೋಡೆ ನಡೆಸಿದ್ದ ಪ್ರಕರಣ ಸೂತ್ರಧಾರನೇ ಕಾನ್ಸ್ಟೆಬಲ್ ಎಂಬುದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ.</p>.ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ.<p>ದರೋಡೆ ಪ್ರಕರಣದಲ್ಲಿ ತನಿಖೆ ತೀವ್ರಗೊಳಿಸುತ್ತಿದಂತೆಯೇ ವಿವಿಧ ವಿಚಾರಗಳು ಬಹಿರಂಗವಾಗುತ್ತಿವೆ. ಹಲವು ಕೋನಗಳಲ್ಲಿ ತನಿಖೆ ನಡೆಯುತ್ತಿದೆ. </p><p>ಗೋವಿಂದಪುರ ಠಾಣೆಯ ಕಾನ್ಸ್ಟೆಬಲ್ ಅಣ್ಣಪ್ಪ ನಾಯ್ಕ್ ಅವರನ್ನು ವಶಕ್ಕೆ ಪಡೆದಿರುವ ತನಿಖಾಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದಾರೆ. ಕುಂಬಳಗೋಡು ಸೇರಿದಂತೆ ಹಲವು ಕಡೆ ಕಾನ್ಸ್ಟೆಬಲ್ ಕೆಲಸ ಮಾಡಿದ್ದರು ಎಂದು ಮೂಲಗಳು ಹೇಳಿವೆ. ಕಾನ್ಸ್ಟೆಬಲ್ ಮೇಲೆ ಅನುಮಾನ ಬಲವಾಗಿದೆ.</p>.Bengaluru Heist | ‘ಹಗಲು’ ದರೋಡೆ: ಮೂವರ ವಶ, ತಿರುಪತಿಯಲ್ಲಿ ಇನೊವಾ ಕಾರು ಪತ್ತೆ.<p>ಕಮ್ಮನಹಳ್ಳಿ, ಕಲ್ಯಾಣನಗರದ ಯುವಕರನ್ನು ದರೋಡೆಗೆ ಸಿದ್ಧಪಡಿಸಿದ್ದ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ತರಬೇತಿ ನೀಡಿದ್ದರು. </p><p>ಕಾನ್ಸ್ಟೆಬಲ್ ಸೂಚನೆಯಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ ₹ 7.11 ಕೋಟಿ ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಬೆಂಬಲ ನೀಡಿದ್ದ, ಕದ್ದ ಹಣವನ್ನು ನಗರದ ಗಡಿಪ್ರದೇಶದಲ್ಲಿ ಬಚ್ಚಿಟ್ಟು ಪರಾರಿ ಆಗಿದ್ದಾರೆ.</p>.₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ....<p>ಪೊಲೀಸರ ತನಿಖೆ ಯಾವ ರೀತಿ ನಡೆಯುತ್ತದೆ? ಹೇಗೆ ತಪ್ಪಿಸಿಕೊಳ್ಳಬೇಕು? ಎಂಬೆಲ್ಲ ವಿಚಾರವನ್ನು ಚರ್ಚಿಸಿ ಅಣ್ಣಪ್ಪ ಸಂಚು ರೂಪಿಸಿದ್ದರು ಎಂದು ಹೇಳಲಾಗಿದೆ.</p><p>ಇನ್ನು, ಇದೇ ವೇಳೆ ದರೋಡೆ ಹಣದ ಆಸೆಗಾಗಿ ಸಂಸ್ಥೆಯ ಗೋಪ್ಯ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇರೆಗೆ ಸಿಎಂಎಸ್ ಏಜೆನ್ಸಿಯ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ ತಾಂತ್ರಿಕ ವಿಭಾಗ, ಭದ್ರತಾ ವಿಭಾಗದ ಅಧಿಕಾರಿ-ಸಿಬ್ಬಂದಿ, ಇಬ್ಬರು ಕಸ್ಟೋಡಿಯನ್ ಕೂಡ ಇದ್ದಾರೆ.</p>.VIDEO| ಬೆಂಗಳೂರು: ಎಟಿಎಂ ವಾಹನ ದರೋಡೆ; 7 ಕೋಟಿ ರೂ. ದೋಚಿ ಪರಾರಿ!.<p>ಮತ್ತೊಂದೆಡೆ ಈ ಹಿಂದೆ ಸಿಎಂಎಸ್ ಸಂಸ್ಥೆಯ ವಾಹನದಲ್ಲಿ ಹಣ ಕಳವು ನಡೆದಾಗ ವಾಹನದ ಎರಡು ಬದಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ಆದರೆ, ಈ ವಾಹನಕ್ಕೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನು ತೆಗೆಯಲಾಗಿತ್ತು. ಹೀಗಾಗಿ ಸಿಎಂಎಸ್ ಸಂಸ್ಥೆಯ ಭದ್ರತಾ ವಿಭಾಗದ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ ₹ 7.11 ಕೋಟಿ ದರೋಡೆ ನಡೆಸಿದ್ದ ಪ್ರಕರಣ ಸೂತ್ರಧಾರನೇ ಕಾನ್ಸ್ಟೆಬಲ್ ಎಂಬುದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ.</p>.ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ATMಗೆ ಹಣ ತುಂಬುವ ವಾಹನದಿಂದ ₹7ಕೋಟಿ ದರೋಡೆ.<p>ದರೋಡೆ ಪ್ರಕರಣದಲ್ಲಿ ತನಿಖೆ ತೀವ್ರಗೊಳಿಸುತ್ತಿದಂತೆಯೇ ವಿವಿಧ ವಿಚಾರಗಳು ಬಹಿರಂಗವಾಗುತ್ತಿವೆ. ಹಲವು ಕೋನಗಳಲ್ಲಿ ತನಿಖೆ ನಡೆಯುತ್ತಿದೆ. </p><p>ಗೋವಿಂದಪುರ ಠಾಣೆಯ ಕಾನ್ಸ್ಟೆಬಲ್ ಅಣ್ಣಪ್ಪ ನಾಯ್ಕ್ ಅವರನ್ನು ವಶಕ್ಕೆ ಪಡೆದಿರುವ ತನಿಖಾಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದಾರೆ. ಕುಂಬಳಗೋಡು ಸೇರಿದಂತೆ ಹಲವು ಕಡೆ ಕಾನ್ಸ್ಟೆಬಲ್ ಕೆಲಸ ಮಾಡಿದ್ದರು ಎಂದು ಮೂಲಗಳು ಹೇಳಿವೆ. ಕಾನ್ಸ್ಟೆಬಲ್ ಮೇಲೆ ಅನುಮಾನ ಬಲವಾಗಿದೆ.</p>.Bengaluru Heist | ‘ಹಗಲು’ ದರೋಡೆ: ಮೂವರ ವಶ, ತಿರುಪತಿಯಲ್ಲಿ ಇನೊವಾ ಕಾರು ಪತ್ತೆ.<p>ಕಮ್ಮನಹಳ್ಳಿ, ಕಲ್ಯಾಣನಗರದ ಯುವಕರನ್ನು ದರೋಡೆಗೆ ಸಿದ್ಧಪಡಿಸಿದ್ದ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ತರಬೇತಿ ನೀಡಿದ್ದರು. </p><p>ಕಾನ್ಸ್ಟೆಬಲ್ ಸೂಚನೆಯಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ ₹ 7.11 ಕೋಟಿ ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಬೆಂಬಲ ನೀಡಿದ್ದ, ಕದ್ದ ಹಣವನ್ನು ನಗರದ ಗಡಿಪ್ರದೇಶದಲ್ಲಿ ಬಚ್ಚಿಟ್ಟು ಪರಾರಿ ಆಗಿದ್ದಾರೆ.</p>.₹7.11 ಕೋಟಿ ದರೋಡೆ: ಕೃತ್ಯ ಎಸಗಿದ ಬಳಿಕ ದರೋಡೆಕೋರರು ಸಾಗಿದ್ದು ಈ ಮಾರ್ಗದಲ್ಲಿ....<p>ಪೊಲೀಸರ ತನಿಖೆ ಯಾವ ರೀತಿ ನಡೆಯುತ್ತದೆ? ಹೇಗೆ ತಪ್ಪಿಸಿಕೊಳ್ಳಬೇಕು? ಎಂಬೆಲ್ಲ ವಿಚಾರವನ್ನು ಚರ್ಚಿಸಿ ಅಣ್ಣಪ್ಪ ಸಂಚು ರೂಪಿಸಿದ್ದರು ಎಂದು ಹೇಳಲಾಗಿದೆ.</p><p>ಇನ್ನು, ಇದೇ ವೇಳೆ ದರೋಡೆ ಹಣದ ಆಸೆಗಾಗಿ ಸಂಸ್ಥೆಯ ಗೋಪ್ಯ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇರೆಗೆ ಸಿಎಂಎಸ್ ಏಜೆನ್ಸಿಯ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ ತಾಂತ್ರಿಕ ವಿಭಾಗ, ಭದ್ರತಾ ವಿಭಾಗದ ಅಧಿಕಾರಿ-ಸಿಬ್ಬಂದಿ, ಇಬ್ಬರು ಕಸ್ಟೋಡಿಯನ್ ಕೂಡ ಇದ್ದಾರೆ.</p>.VIDEO| ಬೆಂಗಳೂರು: ಎಟಿಎಂ ವಾಹನ ದರೋಡೆ; 7 ಕೋಟಿ ರೂ. ದೋಚಿ ಪರಾರಿ!.<p>ಮತ್ತೊಂದೆಡೆ ಈ ಹಿಂದೆ ಸಿಎಂಎಸ್ ಸಂಸ್ಥೆಯ ವಾಹನದಲ್ಲಿ ಹಣ ಕಳವು ನಡೆದಾಗ ವಾಹನದ ಎರಡು ಬದಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ಆದರೆ, ಈ ವಾಹನಕ್ಕೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನು ತೆಗೆಯಲಾಗಿತ್ತು. ಹೀಗಾಗಿ ಸಿಎಂಎಸ್ ಸಂಸ್ಥೆಯ ಭದ್ರತಾ ವಿಭಾಗದ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>