<p><strong>ಬೆಂಗಳೂರು: </strong>ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ದೈಹಿಕ ಪರೀಕ್ಷೆಗೆ ನಕಲಿ ಅಭ್ಯರ್ಥಿಯನ್ನು ಕಳುಹಿಸಿದ್ದ ಅಸಲಿ ಅಭ್ಯರ್ಥಿ ಯಾಸೀನ್ ಅಬ್ದುಲ್ ಕರಿಸಾಬ್ (25) ಅವರನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದ ಯಾಸೀನ್, ತಮ್ಮ ಸ್ನೇಹಿತ ಸಚಿನ್ ಗುಗ್ಗರೆ ಅವರನ್ನು 2020ರ ನವೆಂಬರ್ 19ರಂದು ದೈಹಿಕ ಪರೀಕ್ಷೆಗೆ ಕಳುಹಿಸಿದ್ದರು. ಸಚಿನ್ ಪರೀಕ್ಷೆಯಲ್ಲಿ ಉತ್ತೀರ್ಣವಾಗಿದ್ದರು. ಕಾನ್ಸ್ಟೆಬಲ್ ಹುದ್ದೆಗೆ ಯಾಸೀನ್ ಅರ್ಹತೆ ಗಿಟ್ಟಿಸಿಕೊಂಡಿದ್ದರು’ ಎಂದು ಪೊಲೀಸರು ಮೂಲಗಳು ಹೇಳಿವೆ.</p>.<p>‘ಕಾನ್ಸ್ಟೆಬಲ್ ಹುದ್ದೆಗೆ ಅರ್ಹತೆ ಪಡೆದವರ ದಾಖಲೆಗಳ ಪರಿಶೀಲನೆ ಇತ್ತೀಚೆಗೆ ನಡೆದಿತ್ತು. ಅದೇ ಸಂದರ್ಭದಲ್ಲಿ ಅಭ್ಯರ್ಥಿ ಯಾಸೀನ್ ಮೇಲೆ ಅಧಿಕಾರಿಗಳಿಗೆ ಅನುಮಾನ ಬಂದಿತ್ತು. ಲಿಖಿತ ಹಾಗೂ ದೈಹಿಕ ಪರೀಕ್ಷೆ ವಿಡಿಯೊಗಳನ್ನು ಪರಿಶೀಲಿಸಿದಾಗ ನಕಲಿ ಅಭ್ಯರ್ಥಿ ಅಕ್ರಮ ಬಯಲಾಯಿತು’ ಎಂದೂ ತಿಳಿಸಿವೆ.</p>.<p>‘ಆರೋಪಿ ಯಾಸೀನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ನಕಲಿ ಅಭ್ಯರ್ಥಿ ಸಚಿನ್ ತಲೆಮರೆಸಿಕೊಂಡಿದ್ದಾರೆ’ ಎಂದೂ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ದೈಹಿಕ ಪರೀಕ್ಷೆಗೆ ನಕಲಿ ಅಭ್ಯರ್ಥಿಯನ್ನು ಕಳುಹಿಸಿದ್ದ ಅಸಲಿ ಅಭ್ಯರ್ಥಿ ಯಾಸೀನ್ ಅಬ್ದುಲ್ ಕರಿಸಾಬ್ (25) ಅವರನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದ ಯಾಸೀನ್, ತಮ್ಮ ಸ್ನೇಹಿತ ಸಚಿನ್ ಗುಗ್ಗರೆ ಅವರನ್ನು 2020ರ ನವೆಂಬರ್ 19ರಂದು ದೈಹಿಕ ಪರೀಕ್ಷೆಗೆ ಕಳುಹಿಸಿದ್ದರು. ಸಚಿನ್ ಪರೀಕ್ಷೆಯಲ್ಲಿ ಉತ್ತೀರ್ಣವಾಗಿದ್ದರು. ಕಾನ್ಸ್ಟೆಬಲ್ ಹುದ್ದೆಗೆ ಯಾಸೀನ್ ಅರ್ಹತೆ ಗಿಟ್ಟಿಸಿಕೊಂಡಿದ್ದರು’ ಎಂದು ಪೊಲೀಸರು ಮೂಲಗಳು ಹೇಳಿವೆ.</p>.<p>‘ಕಾನ್ಸ್ಟೆಬಲ್ ಹುದ್ದೆಗೆ ಅರ್ಹತೆ ಪಡೆದವರ ದಾಖಲೆಗಳ ಪರಿಶೀಲನೆ ಇತ್ತೀಚೆಗೆ ನಡೆದಿತ್ತು. ಅದೇ ಸಂದರ್ಭದಲ್ಲಿ ಅಭ್ಯರ್ಥಿ ಯಾಸೀನ್ ಮೇಲೆ ಅಧಿಕಾರಿಗಳಿಗೆ ಅನುಮಾನ ಬಂದಿತ್ತು. ಲಿಖಿತ ಹಾಗೂ ದೈಹಿಕ ಪರೀಕ್ಷೆ ವಿಡಿಯೊಗಳನ್ನು ಪರಿಶೀಲಿಸಿದಾಗ ನಕಲಿ ಅಭ್ಯರ್ಥಿ ಅಕ್ರಮ ಬಯಲಾಯಿತು’ ಎಂದೂ ತಿಳಿಸಿವೆ.</p>.<p>‘ಆರೋಪಿ ಯಾಸೀನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ನಕಲಿ ಅಭ್ಯರ್ಥಿ ಸಚಿನ್ ತಲೆಮರೆಸಿಕೊಂಡಿದ್ದಾರೆ’ ಎಂದೂ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>