ಎಐಸಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಸಂಯೋಜಕ ಕೆ. ರಾಜು, ‘ದೇಶದಲ್ಲಿ ಅಸಮಾನತೆ ಹೆಚ್ಚಿದೆ. ಸಂಪತ್ತು ಕೆಲವರ ಬಳಿ ಕೇಂದ್ರೀಕೃತವಾಗಿದೆ. ಎಲ್ಲ ಕ್ಷೇತ್ರಗಳನ್ನೂ ಖಾಸಗೀಕರಣ ಮಾಡಲಾಗುತ್ತಿದೆ. ಆದ್ದರಿಂದ ಖಾಸಗಿ ವಲಯದಲ್ಲಿಯೂ ಮೀಸಲಾತಿಗೆ ಆಗ್ರಹಿಸಬೇಕಿದೆ’ ಎಂದು ಹೇಳಿದರು.