‘ಸಂವಿಧಾನದಲ್ಲಿ ಜಾತ್ಯತೀತ ರಾಷ್ಟ್ರ ಎಂಬ ಉಲ್ಲೇಖವಿದೆ. ಆದರೆ, ಇಂದು ದೇಶದಲ್ಲಿ ಇದಕ್ಕೆ ವಿರುದ್ಧವಾಗಿ ಧರ್ಮದ ಆಧಾರದಲ್ಲಿ ಆಡಳಿತ ನಡೆಯುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜಾತಿ–ಧರ್ಮಕ್ಕಿಂತ ಸಂವಿಧಾನವೇ ಮುಖ್ಯ. ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಎಂಬ ಸಂವಿಧಾನದ ಮೂಲ ಆಶಯಗಳನ್ನು ರಕ್ಷಣೆ ಮಾಡಬೇಕಿದೆ. ಸಂವಿಧಾನದ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.