‘ಸಾಮಾಜಿಕ ಜಾಲತಾಣಗಳಲ್ಲಿ ಅಸಂವಿಧಾನಿಕ ವರ್ತನೆ ತೋರುವ, ವೈಯಕ್ತಿಕ ತೇಜೋವಧೆಗೆ ಮುಂದಾಗುವ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಟ ಚೇತನ್, ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಅನೇಕ ಪ್ರಗತಿಪರ ಚಿಂತಕರ ಮೇಲೆ ದಾಖಲಾಗಿರುವ ದುರುದ್ದೇಶಪೂರಿತ ಹಾಗೂ ಆಧಾರ ರಹಿತ ಪ್ರಕರಣಗಳನ್ನು ರದ್ದುಗೊಳಿಸಬೇಕು. ಹಂಸಲೇಖ ವಿರುದ್ಧ ದೂರು ದಾಖಲಿಸಿ ಸಮಾಜದಲ್ಲಿ ಧ್ವೇಷ ಭಾವನೆ ಉಲ್ಬಣಿಸುವಂತೆ ಮಾಡಿರುವವರ ಮೇಲೆ ದೂರು ನೀಡಲಾಗಿದ್ದು, ಅದನ್ನು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.