ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠವು, ‘ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳ ಮೇಲ್ವಿಚಾರಣೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ಈಗಾಗಲೇ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದೆ. ಆದ್ದರಿಂದ, ಈ ವಿಚಾರವಾಗಿ ಹೈಕೋರ್ಟ್ ಯಾವುದೇ ನಿರ್ದೇಶನ ನೀಡುವುದಿಲ್ಲ. ಆದರೆ, ಬಫರ್ ವಲಯದಲ್ಲಿ ಏರಿ ನಿರ್ಮಾಣ ಮಾಡುತ್ತಿರುವ ವಿಚಾರವನ್ನು ಈ ಸಮಿತಿಯ ಗಮನಕ್ಕೆ ತರಬೇಕು’ ಎಂದು ಆಯುಕ್ತರಿಗೆ ಸೂಚಿಸಿತ್ತು.