<p><strong>ಬೆಂಗಳೂರು</strong>: ರಾಜ್ಯದಲ್ಲಿ ವಿಜ್ಞಾನ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರ ಹಾಗೂ ತುಮಕೂರಿನಲ್ಲಿ ಶಾಶ್ವತ ನಕ್ಷತ್ರ ಮಂದಿರಗಳನ್ನು ನಿರ್ಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಹುಲಿಕಲ್ ನಟರಾಜ್ ಹೇಳಿದರು. </p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘₹2.5 ಕೋಟಿಯಿಂದ ₹3 ಕೋಟಿವರೆಗೆ ಸಿಎಸ್ಆರ್ ನಿಧಿ ಬಳಸಿಕೊಂಡು ದೊಡ್ಡಬಳ್ಳಾಪುರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಆ್ಯನಿ ಬೆಸೆಂಟ್ ಉದ್ಯಾನ ಹಾಗೂ ತುಮಕೂರಿನ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಾಶ್ವತ ನಕ್ಷತ್ರ ಮಂದಿರಗಳನ್ನು ನಿರ್ಮಿಸಲಾಗುವುದು. ಇದರಲ್ಲಿ 85 ರಿಂದ 100 ಆಸನಗಳ ಸಾಮರ್ಥ್ಯ ಇರಲಿವೆ’ ಎಂದು ಹೇಳಿದರು. </p>.<p>‘ಈ ನಕ್ಷತ್ರ ಮಂದಿರಗಳಲ್ಲಿ ವಿಜ್ಞಾನದ ಅಧ್ಯಯನ, ಶಿಕ್ಷಕರಿಗೆ ತರಬೇತಿ, ಗಗನ ವೀಕ್ಷಣಾ ಶಿಬಿರಗಳು, ಮೂಢನಂಬಿಕೆಯ ವಿರುದ್ಧ ಕಿರುಚಿತ್ರಗಳ ಪ್ರದರ್ಶನ ಮಾಡಲಾಗುತ್ತಿದೆ. ಈ ಮಂದಿರಗಳು ವಿಜ್ಞಾನ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ’ ಎಂದರು.</p>.<p>ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಸಹಾಯಕ ಆಯುಕ್ತ ಮೋಹನ್ ಕೊಂಡಜ್ಜಿ ಸುದ್ದಿಗೋಷ್ಠಿಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ವಿಜ್ಞಾನ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರ ಹಾಗೂ ತುಮಕೂರಿನಲ್ಲಿ ಶಾಶ್ವತ ನಕ್ಷತ್ರ ಮಂದಿರಗಳನ್ನು ನಿರ್ಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಹುಲಿಕಲ್ ನಟರಾಜ್ ಹೇಳಿದರು. </p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘₹2.5 ಕೋಟಿಯಿಂದ ₹3 ಕೋಟಿವರೆಗೆ ಸಿಎಸ್ಆರ್ ನಿಧಿ ಬಳಸಿಕೊಂಡು ದೊಡ್ಡಬಳ್ಳಾಪುರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಆ್ಯನಿ ಬೆಸೆಂಟ್ ಉದ್ಯಾನ ಹಾಗೂ ತುಮಕೂರಿನ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಾಶ್ವತ ನಕ್ಷತ್ರ ಮಂದಿರಗಳನ್ನು ನಿರ್ಮಿಸಲಾಗುವುದು. ಇದರಲ್ಲಿ 85 ರಿಂದ 100 ಆಸನಗಳ ಸಾಮರ್ಥ್ಯ ಇರಲಿವೆ’ ಎಂದು ಹೇಳಿದರು. </p>.<p>‘ಈ ನಕ್ಷತ್ರ ಮಂದಿರಗಳಲ್ಲಿ ವಿಜ್ಞಾನದ ಅಧ್ಯಯನ, ಶಿಕ್ಷಕರಿಗೆ ತರಬೇತಿ, ಗಗನ ವೀಕ್ಷಣಾ ಶಿಬಿರಗಳು, ಮೂಢನಂಬಿಕೆಯ ವಿರುದ್ಧ ಕಿರುಚಿತ್ರಗಳ ಪ್ರದರ್ಶನ ಮಾಡಲಾಗುತ್ತಿದೆ. ಈ ಮಂದಿರಗಳು ವಿಜ್ಞಾನ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ’ ಎಂದರು.</p>.<p>ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಸಹಾಯಕ ಆಯುಕ್ತ ಮೋಹನ್ ಕೊಂಡಜ್ಜಿ ಸುದ್ದಿಗೋಷ್ಠಿಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>