<p><strong>ಬೆಂಗಳೂರು</strong>: ‘ಕಾರ್ಮಿಕ ವರ್ಗಕ್ಕೆ ಸೇರಿರುವ ನಾವುಗಳು ಅನ್ಯಾಯದ ಮೇಲೆ ನಿಂತಿರುವ ಈಗಿನ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಅವಶ್ಯಕತೆ ಇದೆ’ ಎಂದುಎಐಯುಟಿಯುಸಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕೆ.ವಿ.ಭಟ್ ತಿಳಿಸಿದರು.</p>.<p>ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘವು ಭಾನುವಾರ ಹಮ್ಮಿಕೊಂಡಿದ್ದ ಬೆಂಗಳೂರು ಪೂರ್ವ ವಲಯದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ಎಲ್ಲ ಸದಸ್ಯರ ಮೇಲಿದೆ. ಅದನ್ನು ಕಾರ್ಯರೂಪಕ್ಕೆ ತರಲು ಕಾರ್ಮಿಕರಿಗೆ ಕ್ರಾಂತಿಕಾರಿ ಹಾಗೂ ಹೋರಾಟದ ವಿಚಾರಗಳ ಅವಶ್ಯಕತೆ ಇದೆ’ ಎಂದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎಸ್.ಷಣ್ಮುಗಂ,‘ಕೋವಿಡ್ನಿಂದಾಗಿ ಲಕ್ಷಾಂತರ ದಿನಗೂಲಿ ನೌಕರರು ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ಇತ್ತ ಕಾರ್ಮಿಕ ಕಾಯ್ದೆಗಳ ಮೂಲಕ ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ನಿರಂತರ ಹೋರಾಟಗಳಿಂದ ಇದನ್ನು ತಡೆಯಬೇಕು’ ಎಂದು ಹೇಳಿದರು.</p>.<p>ಉಪಾಧ್ಯಕ್ಷ ಗೋವಿಂದರಾಜನ್, ‘ಕಾರ್ಮಿಕರ ಒಗ್ಗಟ್ಟು ಇಂದಿನ ಬಂಡವಾಳಶಾಹಿ ಪರಿಸ್ಥಿತಿಯಲ್ಲಿ ಅಗತ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಾರ್ಮಿಕ ವರ್ಗಕ್ಕೆ ಸೇರಿರುವ ನಾವುಗಳು ಅನ್ಯಾಯದ ಮೇಲೆ ನಿಂತಿರುವ ಈಗಿನ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಅವಶ್ಯಕತೆ ಇದೆ’ ಎಂದುಎಐಯುಟಿಯುಸಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕೆ.ವಿ.ಭಟ್ ತಿಳಿಸಿದರು.</p>.<p>ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘವು ಭಾನುವಾರ ಹಮ್ಮಿಕೊಂಡಿದ್ದ ಬೆಂಗಳೂರು ಪೂರ್ವ ವಲಯದ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ಎಲ್ಲ ಸದಸ್ಯರ ಮೇಲಿದೆ. ಅದನ್ನು ಕಾರ್ಯರೂಪಕ್ಕೆ ತರಲು ಕಾರ್ಮಿಕರಿಗೆ ಕ್ರಾಂತಿಕಾರಿ ಹಾಗೂ ಹೋರಾಟದ ವಿಚಾರಗಳ ಅವಶ್ಯಕತೆ ಇದೆ’ ಎಂದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎಸ್.ಷಣ್ಮುಗಂ,‘ಕೋವಿಡ್ನಿಂದಾಗಿ ಲಕ್ಷಾಂತರ ದಿನಗೂಲಿ ನೌಕರರು ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ಇತ್ತ ಕಾರ್ಮಿಕ ಕಾಯ್ದೆಗಳ ಮೂಲಕ ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ನಿರಂತರ ಹೋರಾಟಗಳಿಂದ ಇದನ್ನು ತಡೆಯಬೇಕು’ ಎಂದು ಹೇಳಿದರು.</p>.<p>ಉಪಾಧ್ಯಕ್ಷ ಗೋವಿಂದರಾಜನ್, ‘ಕಾರ್ಮಿಕರ ಒಗ್ಗಟ್ಟು ಇಂದಿನ ಬಂಡವಾಳಶಾಹಿ ಪರಿಸ್ಥಿತಿಯಲ್ಲಿ ಅಗತ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>