‘ಚೇತನ್ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ. ಪದೇ ಪದೇ ಗಣ್ಯ ವ್ಯಕ್ತಿಗಳ ವಿರುದ್ಧ ಈತ ಹೇಳಿಕೆ ನೀಡುತ್ತಿದ್ದಾನೆ. ಕಾನೂನಿನ ಚೌಕಟ್ಟಿನಲ್ಲಿ ಚೇತನ್ ಹೇಳಿಕೆಯು ಶಿಕ್ಷಾರ್ಹ ಅಪರಾಧವಾಗಿದೆ. ನಾಡಪ್ರಭು ಕೆಂಪೇಗೌಡ ಅವರು ಮಹಾನ್ ವ್ಯಕ್ತಿಯೆಂದು ಜನರು ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಚೇತನ್ ಅವರನ್ನು ಠಾಣೆಗೆ ಕರೆಸಿ ಸೂಕ್ತ ತಿಳಿವಳಿಕೆ ನೀಡಿ, ಅವಹೇಳನಕಾರಿ ಪೋಸ್ಟ್ ಅಳಿಸಿಹಾಕುವಂತೆ ಸೂಚಿಸಬೇಕು’ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.