<p><strong>ಬೆಂಗಳೂರು:</strong> ಇದೇ 17ರಿಂದ ಆರಂಭವಾಗುವ ವಿಧಾನಸಭಾ ಅಧಿವೇಶನ ಒಟ್ಟು 25 ದಿನಗಳ ಕಾಲ ನಡೆಯಲಿದ್ದು,ಈ ಬಾರಿಯೂ ವಿದ್ಯುನ್ಮಾನ ಮಾಧ್ಯಮಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ.</p>.<p>ಕಳೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಯೊಳಗೆ ಖಾಸಗಿ ಸುದ್ದಿ ವಾಹಿನಿಗಳ ಕ್ಯಾಮರಾಗಳಿಗೆ ಪ್ರವೇಶ ನಿಷೇಧಿಸಲಾಗಿತ್ತು. ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿರ್ಬಂಧ ತೆರವುಗೊಳಿಸುವ ನಿರೀಕ್ಷೆ ಇತ್ತು. ಆದರೆ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ನಿರ್ಬಂಧ ಮುಂದುವರಿಸಿರುವುದಾಗಿ ಪ್ರಕಟಿಸಿದರು.</p>.<p>ಸುದ್ದಿ ವಾಹಿನಿಗಳಿಗೆ ನಿರ್ಬಂಧ ಕಾಯಂ ಆಗುವ ಸೂಚನೆಯನ್ನು ಕಾಗೇರಿ ನೀಡಿದರು. ‘ಲೋಕಸಭೆ, ರಾಜ್ಯಸಭೆ ಮತ್ತು ಹಲವು ರಾಜ್ಯಗಳಲ್ಲಿ ಅನುಸರಿಸುತ್ತಿರುವ ಪದ್ಧತಿಯನ್ನೇ ಇಲ್ಲೂ ಪಾಲಿಸಲಾಗುವುದು’ ಎಂದರು.</p>.<p><strong>25 ದಿನಗಳ ಅಧಿವೇಶನ:</strong> ಈ ಬಾರಿ ಒಟ್ಟು 25 ದಿನಗಳ ಕಾಲ ಅಧಿವೇಶನ ನಡೆಯಲಿದೆ(ಫೆ.17ರಿಂದ ಮಾರ್ಚ್ 31ರವರೆಗೆ). ಮೊದಲ ದಿನ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಕಾಗೇರಿ ತಿಳಿಸಿದರು.</p>.<p>ಮಾರ್ಚ್ 5ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 2 ಮತ್ತು 3ರಂದು ಸಂವಿಧಾನದ ಕುರಿತು ಎರಡು ದಿನಗಳ ಕಾಲ ಚರ್ಚೆ ನಡೆಯಲಿದೆ. ಈ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ಜತೆ ಚರ್ಚಿಸಲಾಗಿದೆ. ಸಂವಿಧಾನದ ಆಶಯಗಳು, ವಿಶೇಷತೆ ಕುರಿತು ಚರ್ಚೆ ನಡೆಯಬೇಕಾಗಿದೆ. ರಾಜಕೀಯದ ಸ್ಪರ್ಶ ಇಲ್ಲದಂತೆ ಎಚ್ಚರಿಕೆ ವಹಿಸಿ ಮಾತನಾಡಬೇಕು ಎಂದು ಅವರು ಹೇಳಿದರು.</p>.<p>ಮಾರ್ಚ್ 4ರಿಂದ ಮಾರ್ಚ್ 31ರ ವರೆಗೆ ಪ್ರಶ್ನೋತ್ತರ ಮತ್ತು ಇತರ ಕಲಾಪಗಳಿಗೆ ಅವಕಾಶ ನೀಡಲಾಗಿದೆ. ಈ ಅಧಿವೇಶನದಲ್ಲಿ ಒಟ್ಟು 6 ಮಸೂದೆಗಳು ಮಂಡನೆಯಾಗಲಿವೆ ಎಂದರು.</p>.<p><strong>ಮಂಡನೆಯಾಗುವ ಮಸೂದೆಗಳು</strong></p>.<p>* ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ನಾವಿನ್ಯತಾ ಪ್ರಾಧಿಕಾರ ಮಸೂದೆ</p>.<p>* ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ರಾಜಭಾಷಾ (ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ</p>.<p>* ಪರ್ಯಾಲೋಚನೆ ಮತ್ತು ಅಂಗೀಕಾರಕ್ಕೆ ಬಾಕಿ ಇರುವ ಮಸೂದೆ– ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಮಸೂದೆ–2018.</p>.<p>***</p>.<p>ಮುಂದಿನ ದಿನಗಳಲ್ಲಿ ಹೊಸ ಮಸೂದೆಗಳನ್ನು ಮಂಡಿಸಲು ಸರ್ಕಾರದಿಂದ ಕೋರಿಕೆ ಬಂದರೆ ಚರ್ಚೆಗೆ ತೆಗೆದುಕೊಳ್ಳಲಾಗುವುದು<br /><strong>-ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಸಭಾಧ್ಯಕ್ಷ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇದೇ 17ರಿಂದ ಆರಂಭವಾಗುವ ವಿಧಾನಸಭಾ ಅಧಿವೇಶನ ಒಟ್ಟು 25 ದಿನಗಳ ಕಾಲ ನಡೆಯಲಿದ್ದು,ಈ ಬಾರಿಯೂ ವಿದ್ಯುನ್ಮಾನ ಮಾಧ್ಯಮಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ.</p>.<p>ಕಳೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಯೊಳಗೆ ಖಾಸಗಿ ಸುದ್ದಿ ವಾಹಿನಿಗಳ ಕ್ಯಾಮರಾಗಳಿಗೆ ಪ್ರವೇಶ ನಿಷೇಧಿಸಲಾಗಿತ್ತು. ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿರ್ಬಂಧ ತೆರವುಗೊಳಿಸುವ ನಿರೀಕ್ಷೆ ಇತ್ತು. ಆದರೆ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ನಿರ್ಬಂಧ ಮುಂದುವರಿಸಿರುವುದಾಗಿ ಪ್ರಕಟಿಸಿದರು.</p>.<p>ಸುದ್ದಿ ವಾಹಿನಿಗಳಿಗೆ ನಿರ್ಬಂಧ ಕಾಯಂ ಆಗುವ ಸೂಚನೆಯನ್ನು ಕಾಗೇರಿ ನೀಡಿದರು. ‘ಲೋಕಸಭೆ, ರಾಜ್ಯಸಭೆ ಮತ್ತು ಹಲವು ರಾಜ್ಯಗಳಲ್ಲಿ ಅನುಸರಿಸುತ್ತಿರುವ ಪದ್ಧತಿಯನ್ನೇ ಇಲ್ಲೂ ಪಾಲಿಸಲಾಗುವುದು’ ಎಂದರು.</p>.<p><strong>25 ದಿನಗಳ ಅಧಿವೇಶನ:</strong> ಈ ಬಾರಿ ಒಟ್ಟು 25 ದಿನಗಳ ಕಾಲ ಅಧಿವೇಶನ ನಡೆಯಲಿದೆ(ಫೆ.17ರಿಂದ ಮಾರ್ಚ್ 31ರವರೆಗೆ). ಮೊದಲ ದಿನ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಕಾಗೇರಿ ತಿಳಿಸಿದರು.</p>.<p>ಮಾರ್ಚ್ 5ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 2 ಮತ್ತು 3ರಂದು ಸಂವಿಧಾನದ ಕುರಿತು ಎರಡು ದಿನಗಳ ಕಾಲ ಚರ್ಚೆ ನಡೆಯಲಿದೆ. ಈ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ಜತೆ ಚರ್ಚಿಸಲಾಗಿದೆ. ಸಂವಿಧಾನದ ಆಶಯಗಳು, ವಿಶೇಷತೆ ಕುರಿತು ಚರ್ಚೆ ನಡೆಯಬೇಕಾಗಿದೆ. ರಾಜಕೀಯದ ಸ್ಪರ್ಶ ಇಲ್ಲದಂತೆ ಎಚ್ಚರಿಕೆ ವಹಿಸಿ ಮಾತನಾಡಬೇಕು ಎಂದು ಅವರು ಹೇಳಿದರು.</p>.<p>ಮಾರ್ಚ್ 4ರಿಂದ ಮಾರ್ಚ್ 31ರ ವರೆಗೆ ಪ್ರಶ್ನೋತ್ತರ ಮತ್ತು ಇತರ ಕಲಾಪಗಳಿಗೆ ಅವಕಾಶ ನೀಡಲಾಗಿದೆ. ಈ ಅಧಿವೇಶನದಲ್ಲಿ ಒಟ್ಟು 6 ಮಸೂದೆಗಳು ಮಂಡನೆಯಾಗಲಿವೆ ಎಂದರು.</p>.<p><strong>ಮಂಡನೆಯಾಗುವ ಮಸೂದೆಗಳು</strong></p>.<p>* ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ನಾವಿನ್ಯತಾ ಪ್ರಾಧಿಕಾರ ಮಸೂದೆ</p>.<p>* ಭಾರತ ರಾಷ್ಟ್ರೀಯ ಕಾನೂನು ವಿದ್ಯಾಲಯ (ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ರಾಜಭಾಷಾ (ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ಮಸೂದೆ</p>.<p>* ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ</p>.<p>* ಪರ್ಯಾಲೋಚನೆ ಮತ್ತು ಅಂಗೀಕಾರಕ್ಕೆ ಬಾಕಿ ಇರುವ ಮಸೂದೆ– ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ಮಸೂದೆ–2018.</p>.<p>***</p>.<p>ಮುಂದಿನ ದಿನಗಳಲ್ಲಿ ಹೊಸ ಮಸೂದೆಗಳನ್ನು ಮಂಡಿಸಲು ಸರ್ಕಾರದಿಂದ ಕೋರಿಕೆ ಬಂದರೆ ಚರ್ಚೆಗೆ ತೆಗೆದುಕೊಳ್ಳಲಾಗುವುದು<br /><strong>-ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಸಭಾಧ್ಯಕ್ಷ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>