ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿಯೊಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಂಗೇರಿ ಉಪನಗರದ ನಿವಾಸಿ, ಕೆಪಿಟಿಸಿಎಲ್ ಗುತ್ತಿಗೆ ನೌಕರ ನವೀನ್ ಆತ್ಮಹತ್ಯೆ ಮಾಡಿಕೊಂಡವರು.
‘ಶುಕ್ರವಾರ ಬೆಳಿಗ್ಗೆ 8.30ರ ಸುಮಾರಿಗೆ ಕೆಲಸಕ್ಕೆಂದು ನವೀನ್ ಅವರು ಮನೆಯಿಂದ ಸ್ಕೂಟರ್ನಲ್ಲಿ ಹೊರಟಿದ್ದರು. ಸ್ಕೂಟರ್ ಅನ್ನು ನಾಯಂಡಹಳ್ಳಿ ಮೇಲ್ಸೇತುವೆಯಲ್ಲಿ ನಿಲ್ಲಿಸಿ, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ನವೀನ್ ಕಳೆದ ನವೆಂಬರ್ನಲ್ಲಿ ಮದುವೆಯಾಗಿದ್ದರು. ಮೂರು ತಿಂಗಳ ಹಿಂದಷ್ಟೇ ಅವರಿಗೆ ಕೆಪಿಟಿಸಿಎಲ್ನಲ್ಲಿ ಗುತ್ತಿಗೆ ಆಧಾರದ ಕೆಲಸ ಸಿಕ್ಕಿತ್ತು’ ಎಂದು ಮೂಲಗಳು ತಿಳಿಸಿವೆ.
‘ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ಧಾರೆಯೇ ಅಥವಾ ಕೆಲಸದ ಸ್ಥಳದಲ್ಲಿ ಬೇರೆ ಯಾವುದಾದರೂ ಸಮಸ್ಯೆ ಇತ್ತೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.