<p><strong>ಬೆಂಗಳೂರು</strong>: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿಯೊಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೆಂಗೇರಿ ಉಪನಗರದ ನಿವಾಸಿ, ಕೆಪಿಟಿಸಿಎಲ್ ಗುತ್ತಿಗೆ ನೌಕರ ನವೀನ್ ಆತ್ಮಹತ್ಯೆ ಮಾಡಿಕೊಂಡವರು.</p>.<p>‘ಶುಕ್ರವಾರ ಬೆಳಿಗ್ಗೆ 8.30ರ ಸುಮಾರಿಗೆ ಕೆಲಸಕ್ಕೆಂದು ನವೀನ್ ಅವರು ಮನೆಯಿಂದ ಸ್ಕೂಟರ್ನಲ್ಲಿ ಹೊರಟಿದ್ದರು. ಸ್ಕೂಟರ್ ಅನ್ನು ನಾಯಂಡಹಳ್ಳಿ ಮೇಲ್ಸೇತುವೆಯಲ್ಲಿ ನಿಲ್ಲಿಸಿ, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ನವೀನ್ ಕಳೆದ ನವೆಂಬರ್ನಲ್ಲಿ ಮದುವೆಯಾಗಿದ್ದರು. ಮೂರು ತಿಂಗಳ ಹಿಂದಷ್ಟೇ ಅವರಿಗೆ ಕೆಪಿಟಿಸಿಎಲ್ನಲ್ಲಿ ಗುತ್ತಿಗೆ ಆಧಾರದ ಕೆಲಸ ಸಿಕ್ಕಿತ್ತು’ ಎಂದು ಮೂಲಗಳು ತಿಳಿಸಿವೆ.</p>.<p>‘ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ಧಾರೆಯೇ ಅಥವಾ ಕೆಲಸದ ಸ್ಥಳದಲ್ಲಿ ಬೇರೆ ಯಾವುದಾದರೂ ಸಮಸ್ಯೆ ಇತ್ತೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿಯೊಬ್ಬರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಕೆಂಗೇರಿ ಉಪನಗರದ ನಿವಾಸಿ, ಕೆಪಿಟಿಸಿಎಲ್ ಗುತ್ತಿಗೆ ನೌಕರ ನವೀನ್ ಆತ್ಮಹತ್ಯೆ ಮಾಡಿಕೊಂಡವರು.</p>.<p>‘ಶುಕ್ರವಾರ ಬೆಳಿಗ್ಗೆ 8.30ರ ಸುಮಾರಿಗೆ ಕೆಲಸಕ್ಕೆಂದು ನವೀನ್ ಅವರು ಮನೆಯಿಂದ ಸ್ಕೂಟರ್ನಲ್ಲಿ ಹೊರಟಿದ್ದರು. ಸ್ಕೂಟರ್ ಅನ್ನು ನಾಯಂಡಹಳ್ಳಿ ಮೇಲ್ಸೇತುವೆಯಲ್ಲಿ ನಿಲ್ಲಿಸಿ, ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ನವೀನ್ ಕಳೆದ ನವೆಂಬರ್ನಲ್ಲಿ ಮದುವೆಯಾಗಿದ್ದರು. ಮೂರು ತಿಂಗಳ ಹಿಂದಷ್ಟೇ ಅವರಿಗೆ ಕೆಪಿಟಿಸಿಎಲ್ನಲ್ಲಿ ಗುತ್ತಿಗೆ ಆಧಾರದ ಕೆಲಸ ಸಿಕ್ಕಿತ್ತು’ ಎಂದು ಮೂಲಗಳು ತಿಳಿಸಿವೆ.</p>.<p>‘ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ಧಾರೆಯೇ ಅಥವಾ ಕೆಲಸದ ಸ್ಥಳದಲ್ಲಿ ಬೇರೆ ಯಾವುದಾದರೂ ಸಮಸ್ಯೆ ಇತ್ತೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>