<p><strong>ಬೆಂಗಳೂರು</strong>: ದೇವನಹಳ್ಳಿಯಲ್ಲಿ ಕೃಷಿ ಭೂಮಿ ಸ್ವಾಧೀನಪಡಿಸಿ ಕೊಳ್ಳುವುದನ್ನು ಕೈಬಿಡುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿ, 30 ಮಂದಿ, ವಿಜ್ಞಾನಿಗಳು, ವಿವಿಧ ಕ್ಷೇತ್ರಗಳ ತಜ್ಞರು, ನೀತಿ ನಿರೂಪಕರು ಕೈಗಾರಿಕೆ ಹಾಗೂ ತಂತ್ರಜ್ಞಾನ ಕ್ಷೇತ್ರದ ಮುಖಂಡರಿಗೆ ಬಹಿರಂಗ ಪತ್ರ ಬರೆದಿದ್ದಾರೆ.</p>.<p>ನಗರಕ್ಕೆ ತರಕಾರಿ, ಹಾಲು, ಹಣ್ಣುಗಳನ್ನು ಪೂರೈಸುತ್ತಿರುವ ಕೃಷಿ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ. ಇದನ್ನು ವಿರೋಧಿಸಿ ‘ಕೈಗಾರಿಕೆಗಾಗಿ ನಮ್ಮ ಭೂಮಿ ಕಸಿದುಕೊಳ್ಳಬೇಡಿ’ ಎಂದು ಆಗ್ರಹಿಸಿ ಅನ್ನದಾತರು ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ.</p>.<p>‘ಕೆಐಎಡಿಬಿ ಈಗಾಗಲೇ ರೈತರಿಂದ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿದೆ. ಆದರೆ, ಅವರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ. ಮಂಡಳಿಯ ಸಮೀಕ್ಷೆ ಪ್ರಕಾರ ಶೇಕಡ 80ಕ್ಕೂ ಅಧಿಕ ರೈತರು ಇಲ್ಲಿ ಭೂಮಿ ಕೊಡಲು ಒಪ್ಪಿಲ್ಲ. ಈ ರೈತರಲ್ಲಿ ಹಲವು ಮಂದಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ್ದಾರೆ. ಅವರಿಂದ ಭೂಮಿ ಪಡೆಯುವುದು ಭೂ ಕಾಯ್ದೆಯ ಉಲ್ಲಂಘನೆಯಾಗುತ್ತದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ತಜ್ಞರ ಅನುಮೋದನೆಯೊಂದಿಗೆ ಬಹಿರಂಗ ಪತ್ರವನ್ನು ಕರ್ನಾಟಕದ ಉದ್ದಿಮೆ ಕೈಗಾರಿಕೆ ಹಾಗೂ ತಂತ್ರಜ್ಞಾನ ಮುಖಂಡರಿಗೆ ಮತ್ತು ಸಂಬಂಧಿಸಿದ ಸಂಸ್ಥೆಗಳಿಗೆ ಬಿಡುಗಡೆ ಮಾಡಿರುವುದಾಗಿ ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮತ್ತು ಸಂಶೋಧಕರಾದ ಎ.ಆರ್ ವಾಸವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇವನಹಳ್ಳಿಯಲ್ಲಿ ಕೃಷಿ ಭೂಮಿ ಸ್ವಾಧೀನಪಡಿಸಿ ಕೊಳ್ಳುವುದನ್ನು ಕೈಬಿಡುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿ, 30 ಮಂದಿ, ವಿಜ್ಞಾನಿಗಳು, ವಿವಿಧ ಕ್ಷೇತ್ರಗಳ ತಜ್ಞರು, ನೀತಿ ನಿರೂಪಕರು ಕೈಗಾರಿಕೆ ಹಾಗೂ ತಂತ್ರಜ್ಞಾನ ಕ್ಷೇತ್ರದ ಮುಖಂಡರಿಗೆ ಬಹಿರಂಗ ಪತ್ರ ಬರೆದಿದ್ದಾರೆ.</p>.<p>ನಗರಕ್ಕೆ ತರಕಾರಿ, ಹಾಲು, ಹಣ್ಣುಗಳನ್ನು ಪೂರೈಸುತ್ತಿರುವ ಕೃಷಿ ಭೂಮಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ. ಇದನ್ನು ವಿರೋಧಿಸಿ ‘ಕೈಗಾರಿಕೆಗಾಗಿ ನಮ್ಮ ಭೂಮಿ ಕಸಿದುಕೊಳ್ಳಬೇಡಿ’ ಎಂದು ಆಗ್ರಹಿಸಿ ಅನ್ನದಾತರು ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ.</p>.<p>‘ಕೆಐಎಡಿಬಿ ಈಗಾಗಲೇ ರೈತರಿಂದ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿದೆ. ಆದರೆ, ಅವರಿಗೆ ಸೂಕ್ತ ಪರಿಹಾರ ಸಿಕ್ಕಿಲ್ಲ. ಮಂಡಳಿಯ ಸಮೀಕ್ಷೆ ಪ್ರಕಾರ ಶೇಕಡ 80ಕ್ಕೂ ಅಧಿಕ ರೈತರು ಇಲ್ಲಿ ಭೂಮಿ ಕೊಡಲು ಒಪ್ಪಿಲ್ಲ. ಈ ರೈತರಲ್ಲಿ ಹಲವು ಮಂದಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ್ದಾರೆ. ಅವರಿಂದ ಭೂಮಿ ಪಡೆಯುವುದು ಭೂ ಕಾಯ್ದೆಯ ಉಲ್ಲಂಘನೆಯಾಗುತ್ತದೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ತಜ್ಞರ ಅನುಮೋದನೆಯೊಂದಿಗೆ ಬಹಿರಂಗ ಪತ್ರವನ್ನು ಕರ್ನಾಟಕದ ಉದ್ದಿಮೆ ಕೈಗಾರಿಕೆ ಹಾಗೂ ತಂತ್ರಜ್ಞಾನ ಮುಖಂಡರಿಗೆ ಮತ್ತು ಸಂಬಂಧಿಸಿದ ಸಂಸ್ಥೆಗಳಿಗೆ ಬಿಡುಗಡೆ ಮಾಡಿರುವುದಾಗಿ ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮತ್ತು ಸಂಶೋಧಕರಾದ ಎ.ಆರ್ ವಾಸವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>