ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು| ಅಡುಗೆ ಅನಿಲ‌ ಸೋರಿಕೆಯಿಂದ ಸ್ಫೋಟ: ನಾಲ್ವರಿಗೆ ಗಾಯ

Published 17 ಸೆಪ್ಟೆಂಬರ್ 2023, 3:35 IST
Last Updated 17 ಸೆಪ್ಟೆಂಬರ್ 2023, 3:35 IST
ಅಕ್ಷರ ಗಾತ್ರ

ಬೆಂಗಳೂರು: ಮುನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ‌ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.

'ಭಾನುವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಆರೋಗ್ಯ ಸ್ಥಿತಿ‌ ಚಿಂತಾಜನಕವಾಗಿದೆ' ಎಂದು ಮಾರತ್ತಹಳ್ಳಿ ಪೊಲೀಸರು ತಿಳಿಸಿದರು.

'ಅಗ್ನಿಶಾಮಕ ದಳದ ಸಿಬ್ಬಂದಿ‌ ಸ್ಥಳಕ್ಕೆ ಬಂದು ಬೆಂಕಿ ನಂದಿಸುತ್ತಿದ್ದಾರೆ' ಎಂದರು.

'ಚಾಮರಾಜನಗರದ ಕುಟುಂಬ, ಹಲವು ವರ್ಷಗಳಿಂದ ವಸಂತನಗರದಲ್ಲಿ ವಾಸವಿತ್ತು' ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT