ಬೆಂಗಳೂರು: ಮುನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.
'ಭಾನುವಾರ ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ' ಎಂದು ಮಾರತ್ತಹಳ್ಳಿ ಪೊಲೀಸರು ತಿಳಿಸಿದರು.
'ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುತ್ತಿದ್ದಾರೆ' ಎಂದರು.
'ಚಾಮರಾಜನಗರದ ಕುಟುಂಬ, ಹಲವು ವರ್ಷಗಳಿಂದ ವಸಂತನಗರದಲ್ಲಿ ವಾಸವಿತ್ತು' ಎಂದೂ ಹೇಳಿದರು.