ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ,‘ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ. ವಿಶ್ವೇಶ್ವರಯ್ಯ ಹಾಗೂ ಸರ್. ಮಿರ್ಜಾ ಇಸ್ಮಾಯಿಲ್ ಅವರ ಅನನ್ಯ ಕೊಡುಗೆಯಿಂದ ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು, ಇಂದು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಬೆಳೆದಿದೆ. ಹಿಂದೆ ಪರಿಷತ್ತಿನ ಅಧ್ಯಕ್ಷರು ವಿಧಾನಸೌಧಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳೇ ಕೆಳಗೆ ಬಂದು ಅವರನ್ನು ಸ್ವಾಗತಿಸುತ್ತಿದ್ದರು. ಆಳುವ ಪ್ರಭುತ್ವವು ಹಿಂದಿನಿಂದಲೂ ಪರಿಷತ್ತಿನೊಂದಿಗೆ ಇಟ್ಟುಕೊಂಡಿದ್ದ ಗೌರವದ ಪ್ರತೀಕವಿದು’ ಎಂದರು.