<p><strong>ಬೆಂಗಳೂರು:</strong> ‘ಆರ್ಥಿಕತೆಗೆ ಶಿಸ್ತು ತರುವ ಉದ್ದೇಶದಿಂದ ಸಮಾಜದ ಎಲ್ಲ ಹಂತಗಳಲ್ಲಿ ಸಮರ್ಥವಾಗಿ ಕೆಲಸ ಮಾಡುವ ತೆರಿಗೆ ಸಲಹೆಗಾರರಿಗೆ (ಟ್ಯಾಕ್ಸ್ ಪ್ರಾಕ್ಟೀಷನರ್ಸ್) ಅನುಕೂಲವಾಗುವಂತೆ ಮಸೂದೆ ರೂಪಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲ ಪ್ರಯತ್ನ ನಡೆಸಲಾಗುವುದು’ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ನಡೆದ ದಕ್ಷಿಣ ಭಾರತ ಟ್ಯಾಕ್ಸ್ ಪ್ರಾಕ್ಟೀಷನರ್ ಗಳ ಸಂಸ್ಥೆಯ ವಾರ್ಷಿಕೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಆರ್ಥಿಕತೆಯನ್ನು ಸದೃಢವಾಗಿ ಕಟ್ಟುವಲ್ಲಿ ತೆರಿಗೆ ಸಲಹೆಗಾರರ ಪಾತ್ರ ದೊಡ್ಡದು. ಅಭಿವೃದ್ಧಿಯ ಎಲ್ಲ ಹಂತಗಳಲ್ಲೂ ಇವರ ಕೆಲಸ ಮಹತ್ವದ್ದು. ರಾಜ್ಯದ ತೆರಿಗೆ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳಲಿದೆ’ ಎಂದರು.</p>.<p>‘ಯಾವುದೇ ಉದ್ಯಮ ಅಥವಾ ಕೈಗಾರಿಕೆ ಆರಂಭಿಸಲು ತೆರಿಗೆ ಸಲಹೆಗಾರರ ಸೇವೆಯೇ ಮೂಲ ಅಡಿಪಾಯ. ತೆರಿಗೆಗಳ ಆಧಾರದ ಮೇಲೆ ಎಲ್ಲ ವ್ಯವಹಾರಗಳಿಗೆ ಇವರು ಶಕ್ತಿ ತುಂಬುತ್ತಾರೆ. ತೆರಿಗೆ ಸಂಗ್ರಹದಲ್ಲಿ ರಾಜ್ಯ ಮುಂಚೂಣಿಯಲ್ಲಿರಲು ಸಲಹೆಗಾರರ ಕೊಡುಗೆ ಅಪಾರ’ ಎಂದು ಹೇಳಿದರು.</p>.<p>ಟ್ಯಾಕ್ಸ್ ಪ್ರಾಕ್ಟೀಷನರ್ ಗಳ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷೆ ನಿಖಿತಾ ಬಡೇಕಾ, ಉಪಾಧ್ಯಕ್ಷ ಮಲ್ಲಾಡಿ ಶ್ರೀನಿವಾಸ, ದಕ್ಷಿಣ ವಿಭಾಗದ ಅಧ್ಯಕ್ಷ ಎಸ್.ನಂಜುಂಡ ಪ್ರಸಾದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಆರ್ಥಿಕತೆಗೆ ಶಿಸ್ತು ತರುವ ಉದ್ದೇಶದಿಂದ ಸಮಾಜದ ಎಲ್ಲ ಹಂತಗಳಲ್ಲಿ ಸಮರ್ಥವಾಗಿ ಕೆಲಸ ಮಾಡುವ ತೆರಿಗೆ ಸಲಹೆಗಾರರಿಗೆ (ಟ್ಯಾಕ್ಸ್ ಪ್ರಾಕ್ಟೀಷನರ್ಸ್) ಅನುಕೂಲವಾಗುವಂತೆ ಮಸೂದೆ ರೂಪಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲ ಪ್ರಯತ್ನ ನಡೆಸಲಾಗುವುದು’ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ನಡೆದ ದಕ್ಷಿಣ ಭಾರತ ಟ್ಯಾಕ್ಸ್ ಪ್ರಾಕ್ಟೀಷನರ್ ಗಳ ಸಂಸ್ಥೆಯ ವಾರ್ಷಿಕೋತ್ಸವದ ಸಮಾರೋಪದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಆರ್ಥಿಕತೆಯನ್ನು ಸದೃಢವಾಗಿ ಕಟ್ಟುವಲ್ಲಿ ತೆರಿಗೆ ಸಲಹೆಗಾರರ ಪಾತ್ರ ದೊಡ್ಡದು. ಅಭಿವೃದ್ಧಿಯ ಎಲ್ಲ ಹಂತಗಳಲ್ಲೂ ಇವರ ಕೆಲಸ ಮಹತ್ವದ್ದು. ರಾಜ್ಯದ ತೆರಿಗೆ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳಲಿದೆ’ ಎಂದರು.</p>.<p>‘ಯಾವುದೇ ಉದ್ಯಮ ಅಥವಾ ಕೈಗಾರಿಕೆ ಆರಂಭಿಸಲು ತೆರಿಗೆ ಸಲಹೆಗಾರರ ಸೇವೆಯೇ ಮೂಲ ಅಡಿಪಾಯ. ತೆರಿಗೆಗಳ ಆಧಾರದ ಮೇಲೆ ಎಲ್ಲ ವ್ಯವಹಾರಗಳಿಗೆ ಇವರು ಶಕ್ತಿ ತುಂಬುತ್ತಾರೆ. ತೆರಿಗೆ ಸಂಗ್ರಹದಲ್ಲಿ ರಾಜ್ಯ ಮುಂಚೂಣಿಯಲ್ಲಿರಲು ಸಲಹೆಗಾರರ ಕೊಡುಗೆ ಅಪಾರ’ ಎಂದು ಹೇಳಿದರು.</p>.<p>ಟ್ಯಾಕ್ಸ್ ಪ್ರಾಕ್ಟೀಷನರ್ ಗಳ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷೆ ನಿಖಿತಾ ಬಡೇಕಾ, ಉಪಾಧ್ಯಕ್ಷ ಮಲ್ಲಾಡಿ ಶ್ರೀನಿವಾಸ, ದಕ್ಷಿಣ ವಿಭಾಗದ ಅಧ್ಯಕ್ಷ ಎಸ್.ನಂಜುಂಡ ಪ್ರಸಾದ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>