<p><strong>ಬೆಂಗಳೂರು:</strong> ಕೊರೊನಾ ಸೋಂಕಿತ ಪತ್ತೆಯಾದ ಹಿನ್ನೆಲೆಯಲ್ಲಿ ಟಿ.ದಾಸರಹಳ್ಳಿಯ ಭುವನೇಶ್ವರಿನಗರದ 1ನೇ ಅಡ್ಡರಸ್ತೆಯಿಂದ 4ನೇ ಅಡ್ಡರಸ್ತೆಯವರೆಗಿನ ರಸ್ತೆಯನ್ನು ಕಂಟೈನ್ಮೆಂಟ್ (ನಿಯಂತ್ರಿತ) ಪ್ರದೇಶವೆಂದು ಘೋಷಿಸಲಾಗಿದ್ದು, ಇದು ಹೆಸರಿಗಷ್ಟೇ ಎಂಬಂತಾಗಿದೆ.</p>.<p>ಕಂಟೈನ್ಮೆಂಟ್ ಪ್ರದೇಶದಲ್ಲೇ ಹಲವರು ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ಕೆಲವು ಸಾರ್ವಜನಿಕರು ಸರ್ಕಾರದ ನಿಯಮ ಪಾಲಿಸದೇ ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಅಡ್ಡಾಡುತ್ತಿದ್ದಾರೆ.</p>.<p>ಈ ಪ್ರದೇಶದದಲ್ಲಿ ಪೊಲೀಸರು ಗಸ್ತು ಮುಗಿಸಿ ಮರಳಿದ ಬಳಿಕ ಅಂಗಡಿಗಳು ಬಾಗಿಲು ತೆರೆಯುತ್ತಿವೆ. ಈ ಬಗ್ಗೆ ಮಾಹಿತಿ ಪಡೆದ ಬಾಗಲಗುಂಟೆ ಠಾಣೆ ಪೊಲೀಸರು, ದಿಢೀರ್ ದಾಳಿ ನಡೆಸಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಅಂಗಡಿ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಿದ್ದಾರೆ.</p>.<p>‘ಕಂಟೈನ್ಮೆಂಟ್ ಪ್ರದೇಶದಲ್ಲಿರುವ ಭೈರವೇಶ್ವರ ಪ್ರಾವಿಜನ್ ಸ್ಟೋರ್, ಪತಂಜಲಿ ಸ್ಟೋರ್, ಮಂಗಲ್ ಫ್ಯಾಮಿಲಿ ಮಾರ್ಟ್ ಹಾಗೂ ಕೇತನ್ ಕಲೆಕ್ಷನ್ ಅಂಗಡಿಗಳು ತೆರೆದಿದ್ದವು. ಅಂಗಡಿಯಲ್ಲಿ ಗ್ರಾಹಕರಿಗೆ ನೀಡಲು ಯಾವುದೇ ಸ್ಯಾನಿಟೈಸರ್ ಇರಲಿಲ್ಲ. ಹಲವರು ಮಾಸ್ಕ್ ಸಹ ಧರಿಸಿರಲಿಲ್ಲ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಅಂಗಡಿಗಳನ್ನು ಮುಚ್ಚಿಸಿದ್ದೇವೆ. ಅಂಗಡಿಗಳ ಮಾಲೀಕರಾದ ರಾಜು, ಓಂ ಪ್ರಕಾಶ್, ವಿಷ್ಣು ಮಂಗಲ್ ಹಾಗೂ ಬೋಪಾಲ್ರಾಮ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ’ ಎಂದರು.</p>.<p class="Subhead">ನಿಯಮ ಪಾಲಿಸದವರ ವಿರುದ್ಧವೂ ಪ್ರಕರಣ; ಕೊರೊನಾ ನಿಯಮ ಪಾಲನೆ ಪರಿಶೀಲನೆಗಾಗಿ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.</p>.<p>ಕಂಟೈನ್ಮೆಂಟ್ ಇಲ್ಲದ ಪ್ರದೇಶಗಳಲ್ಲೂ ಪರಸ್ಪರ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡದೇ, ಗ್ರಾಹಕರಿಗೆ ಸ್ಯಾನಿಟೈಸರ್ ನೀಡದೇ, ಮಾಸ್ಕ್ ಸಹ ಧರಿಸದೇ ನಿಯಮ ಉಲ್ಲಂಗಿಸಿದ್ದ ಅಂಗಡಿಗಳ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಾಗಿದೆ.</p>.<p>‘ಮಾರಮ್ಮ ದೇವಸ್ಥಾನ ರಸ್ತೆಯಲ್ಲಿರುವ ರಾಜೇಶ್ವರಿ ಟ್ರೇಡರ್ಸ್ ಮಾಲೀಕ ಅಮೃತ, ಬಾಲಾಜಿ ಪ್ರಾವಿಜನ್ ಸ್ಟೋರ್ ಕೆಲಸಗಾರ ಮಂಜುನಾಥ್, ಪವನ್ ಜ್ಯುವೆಲರ್ಸ್ ಮಳಿಗೆಯ ಕೆಲಸಗಾರ ಸಾಗರ್ ಎಂಬುವರ ವಿರುದ್ಧವೂ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸೋಂಕಿತ ಪತ್ತೆಯಾದ ಹಿನ್ನೆಲೆಯಲ್ಲಿ ಟಿ.ದಾಸರಹಳ್ಳಿಯ ಭುವನೇಶ್ವರಿನಗರದ 1ನೇ ಅಡ್ಡರಸ್ತೆಯಿಂದ 4ನೇ ಅಡ್ಡರಸ್ತೆಯವರೆಗಿನ ರಸ್ತೆಯನ್ನು ಕಂಟೈನ್ಮೆಂಟ್ (ನಿಯಂತ್ರಿತ) ಪ್ರದೇಶವೆಂದು ಘೋಷಿಸಲಾಗಿದ್ದು, ಇದು ಹೆಸರಿಗಷ್ಟೇ ಎಂಬಂತಾಗಿದೆ.</p>.<p>ಕಂಟೈನ್ಮೆಂಟ್ ಪ್ರದೇಶದಲ್ಲೇ ಹಲವರು ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ಕೆಲವು ಸಾರ್ವಜನಿಕರು ಸರ್ಕಾರದ ನಿಯಮ ಪಾಲಿಸದೇ ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಅಡ್ಡಾಡುತ್ತಿದ್ದಾರೆ.</p>.<p>ಈ ಪ್ರದೇಶದದಲ್ಲಿ ಪೊಲೀಸರು ಗಸ್ತು ಮುಗಿಸಿ ಮರಳಿದ ಬಳಿಕ ಅಂಗಡಿಗಳು ಬಾಗಿಲು ತೆರೆಯುತ್ತಿವೆ. ಈ ಬಗ್ಗೆ ಮಾಹಿತಿ ಪಡೆದ ಬಾಗಲಗುಂಟೆ ಠಾಣೆ ಪೊಲೀಸರು, ದಿಢೀರ್ ದಾಳಿ ನಡೆಸಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಅಂಗಡಿ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಿದ್ದಾರೆ.</p>.<p>‘ಕಂಟೈನ್ಮೆಂಟ್ ಪ್ರದೇಶದಲ್ಲಿರುವ ಭೈರವೇಶ್ವರ ಪ್ರಾವಿಜನ್ ಸ್ಟೋರ್, ಪತಂಜಲಿ ಸ್ಟೋರ್, ಮಂಗಲ್ ಫ್ಯಾಮಿಲಿ ಮಾರ್ಟ್ ಹಾಗೂ ಕೇತನ್ ಕಲೆಕ್ಷನ್ ಅಂಗಡಿಗಳು ತೆರೆದಿದ್ದವು. ಅಂಗಡಿಯಲ್ಲಿ ಗ್ರಾಹಕರಿಗೆ ನೀಡಲು ಯಾವುದೇ ಸ್ಯಾನಿಟೈಸರ್ ಇರಲಿಲ್ಲ. ಹಲವರು ಮಾಸ್ಕ್ ಸಹ ಧರಿಸಿರಲಿಲ್ಲ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಅಂಗಡಿಗಳನ್ನು ಮುಚ್ಚಿಸಿದ್ದೇವೆ. ಅಂಗಡಿಗಳ ಮಾಲೀಕರಾದ ರಾಜು, ಓಂ ಪ್ರಕಾಶ್, ವಿಷ್ಣು ಮಂಗಲ್ ಹಾಗೂ ಬೋಪಾಲ್ರಾಮ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ’ ಎಂದರು.</p>.<p class="Subhead">ನಿಯಮ ಪಾಲಿಸದವರ ವಿರುದ್ಧವೂ ಪ್ರಕರಣ; ಕೊರೊನಾ ನಿಯಮ ಪಾಲನೆ ಪರಿಶೀಲನೆಗಾಗಿ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.</p>.<p>ಕಂಟೈನ್ಮೆಂಟ್ ಇಲ್ಲದ ಪ್ರದೇಶಗಳಲ್ಲೂ ಪರಸ್ಪರ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡದೇ, ಗ್ರಾಹಕರಿಗೆ ಸ್ಯಾನಿಟೈಸರ್ ನೀಡದೇ, ಮಾಸ್ಕ್ ಸಹ ಧರಿಸದೇ ನಿಯಮ ಉಲ್ಲಂಗಿಸಿದ್ದ ಅಂಗಡಿಗಳ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಾಗಿದೆ.</p>.<p>‘ಮಾರಮ್ಮ ದೇವಸ್ಥಾನ ರಸ್ತೆಯಲ್ಲಿರುವ ರಾಜೇಶ್ವರಿ ಟ್ರೇಡರ್ಸ್ ಮಾಲೀಕ ಅಮೃತ, ಬಾಲಾಜಿ ಪ್ರಾವಿಜನ್ ಸ್ಟೋರ್ ಕೆಲಸಗಾರ ಮಂಜುನಾಥ್, ಪವನ್ ಜ್ಯುವೆಲರ್ಸ್ ಮಳಿಗೆಯ ಕೆಲಸಗಾರ ಸಾಗರ್ ಎಂಬುವರ ವಿರುದ್ಧವೂ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>