ಬೆಂಗಳೂರು: ಇದೇ ಗುರುವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕೊರೊನಾ ವಿರುದ್ಧ ಬಿಜೆಪಿ ವತಿಯಿಂದ ಜನಜಾಗೃತಿ ಜಾಥಾ ಆಯೋಜಿಸಲಾಗಿದೆ.ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸೋಮವಾರ ಸುದ್ದಿಗಾರ ರಿಗೆ ಈ ವಿಷಯ ತಿಳಿಸಿದರು.
ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಮತ್ತು ಮಾಸ್ಕ್ ಬಳಕೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸ ಲಾಗುವುದು. ಇಂಥ ಸಭೆಗಳಲ್ಲಿ 50 ಕ್ಕಿಂತ ಹೆಚ್ಚು ಜನ ಸೇರಿಸುವುದಿಲ್ಲ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸುತ್ತಾರೆ ಎಂದು ಲಿಂಬಾವಳಿ ಹೇಳಿದರು.