ಚೀನಾದಿಂದ ಬಂದಿರುವ ಈ ದೈತ್ಯ ಯಂತ್ರಗಳ ಬಿಡಿ ಭಾಗಗಳನ್ನು ಜೋಡಿಸುವ ಕಾರ್ಯ ನಡೆಯಬೇಕಿದೆ. ಈ ಕಾರ್ಯಕ್ಕೆ ಚೀನಾ ರೈಲ್ವೆ
ಕನ್ಸ್ಟ್ರಕ್ಷನ್ ಹೆವಿ ಇಂಡಸ್ಟ್ರಿ ಕಾರ್ಪೊ ರೇಷನ್ ಲಿಮಿಟೆಡ್ (ಸಿಆರ್ಸಿಎಚ್ಐಸಿ) ಕಂಪನಿಯ ನೌಕರರು ಚೀನಾದಿಂದ ಬರಬೇಕು. ಆದರೆ, ಕೊರೊನಾ ವೈರಸ್ ಹರಡುವ ಭೀತಿಯಿಂದ, ಚೀನಿಯರ ಭಾರತ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧ ತೆಗೆದ ಬಳಿಕ ಚೀನಾದಿಂದ ತಜ್ಞ ನೌಕರರು ಬಂದ ನಂತರವೇ ಪೂರ್ಣ ಪ್ರಮಾಣದಲ್ಲಿ ಸುರಂಗ ಕೊರೆಯುವ ಕಾರ್ಯ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ‘ಪ್ರಜಾವಾಣಿ’ಗೆ ತಿಳಿಸಿದರು.