<p><strong>ಬೆಂಗಳೂರು: </strong>ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಂಟೈನ್ಮೆಂಟ್ (ನಿಯಂತ್ರಿತ) ಪ್ರದೇಶಗಳ ಸಂಖ್ಯೆಯಲ್ಲೂ ಏರಿಕೆ ಕಂಡುಬರುತ್ತಿದೆ. ಇಂಥ ಪ್ರದೇಶಗಳಲ್ಲಿ ಬಿಬಿಎಂಪಿ ಹಾಗೂ ಪೊಲೀಸರು ಜಂಟಿಯಾಗಿ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ತುರ್ತು ಸಭೆ ನಡೆಸಿದ ಬೊಮ್ಮಾಯಿ, ಕೊರೊನಾ ಸೋಂಕು ಪ್ರಕರಣಗಳು ಹಾಗೂ ಕಂಟೈನ್ಮೆಂಟ್ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ಕುಮಾರ್ ಹಾಗೂ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾಹಿತಿ ಹಂಚಿಕೊಂಡರು.</p>.<p>‘ಕಂಟೈನ್ಮೆಂಟ್ ಪ್ರದೇಶಗಳು ಹೆಚ್ಚಾದಂತೆ ಬಿಬಿಎಂಪಿ ಸಿಬ್ಬಂದಿ ಮೇಲಿನ ಕೆಲಸದ ಒತ್ತಡವೂ ಜಾಸ್ತಿ ಆಗುತ್ತಿದೆ. ಸದ್ಯ ಪೊಲೀಸರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪೊಲೀಸರು ನಮ್ಮೊಂದಿಗೆ ಕೆಲಸಕ್ಕೆ ಕೈಜೋಡಿಸಬೇಕು’ ಎಂದು ಆಯುಕ್ತ ಅನಿಲ್ಕುಮಾರ್ ವಿನಂತಿಸಿದರು.</p>.<p>ಭಾಸ್ಕರ್ ರಾವ್ ಅವರಿಗೆ ಸೂಚನೆ ನೀಡಿದ ಬೊಮ್ಮಾಯಿ, ‘ಬಿಬಿಎಂಪಿ ಸಿಬ್ಬಂದಿಗೆ ಅಗತ್ಯವಾದ ಎಲ್ಲ ಸಹಕಾರ ನೀಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಂಟೈನ್ಮೆಂಟ್ (ನಿಯಂತ್ರಿತ) ಪ್ರದೇಶಗಳ ಸಂಖ್ಯೆಯಲ್ಲೂ ಏರಿಕೆ ಕಂಡುಬರುತ್ತಿದೆ. ಇಂಥ ಪ್ರದೇಶಗಳಲ್ಲಿ ಬಿಬಿಎಂಪಿ ಹಾಗೂ ಪೊಲೀಸರು ಜಂಟಿಯಾಗಿ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ತುರ್ತು ಸಭೆ ನಡೆಸಿದ ಬೊಮ್ಮಾಯಿ, ಕೊರೊನಾ ಸೋಂಕು ಪ್ರಕರಣಗಳು ಹಾಗೂ ಕಂಟೈನ್ಮೆಂಟ್ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ಕುಮಾರ್ ಹಾಗೂ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾಹಿತಿ ಹಂಚಿಕೊಂಡರು.</p>.<p>‘ಕಂಟೈನ್ಮೆಂಟ್ ಪ್ರದೇಶಗಳು ಹೆಚ್ಚಾದಂತೆ ಬಿಬಿಎಂಪಿ ಸಿಬ್ಬಂದಿ ಮೇಲಿನ ಕೆಲಸದ ಒತ್ತಡವೂ ಜಾಸ್ತಿ ಆಗುತ್ತಿದೆ. ಸದ್ಯ ಪೊಲೀಸರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪೊಲೀಸರು ನಮ್ಮೊಂದಿಗೆ ಕೆಲಸಕ್ಕೆ ಕೈಜೋಡಿಸಬೇಕು’ ಎಂದು ಆಯುಕ್ತ ಅನಿಲ್ಕುಮಾರ್ ವಿನಂತಿಸಿದರು.</p>.<p>ಭಾಸ್ಕರ್ ರಾವ್ ಅವರಿಗೆ ಸೂಚನೆ ನೀಡಿದ ಬೊಮ್ಮಾಯಿ, ‘ಬಿಬಿಎಂಪಿ ಸಿಬ್ಬಂದಿಗೆ ಅಗತ್ಯವಾದ ಎಲ್ಲ ಸಹಕಾರ ನೀಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>